LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಇಂದು ಖಗ್ರಾಸ ಚಂದ್ರಗ್ರಹಣದ ದೇವಾಲಯಗಳು ಬಂದ್

ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.



ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಇಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಗ್ರಹಣ ಸ್ಪರ್ಶಕಾಲ, ಮೋಕ್ಷಕಾಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದ್ದು, ದೇವಾಲಯದಲ್ಲಿ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆಯಲಿವೆ.



ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ನಿಮಿಷಾಂಭ ಹಾಗೂ ಶ್ರೀರಂಗನಾಥ ಸ್ವಾಮಿ ದೇವಾಲಯಗಳು, ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇಗುಲ ಬಂದ್ ಆಗಲಿವೆ.



ನಿಮಿಷಾಂಭ ದೇವಾಲಯ ಮಧ್ಯಾಹ್ನ 12 ಗಂಟೆಗೆ ಬಂದ್ ಆಗಲಿದ್ದು, ಸಂಜೆ 7ಗಂಟೆಯವರೆಗೂ ದೇವಾಲಯ ಬಾಗಿಲು ಮುಚ್ಚಲಿದೆ. ಬಳಿಕ ಗ್ರಹಣ ಮೋಕ್ಷದ ಬಳಿಕ ದೇವಾಲಯ ಬಾಗಿಲು ತೆರೆಯಲಿದ್ದು, ಶುದ್ಧಿಕಾರ್ಯ ನಡೆದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.



ಇನ್ನು ಬೆಂಗಳೂರಿನ ಕಾಡುಮಲ್ಲೇಶ್ವರ ದೇವಾಲಯವೂ ಇಂದು ಬಂದ್ ಆಗಲಿದೆ. ಬೆಳಿಗ್ಗೆ 10:30ವರೆಗೆ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ರುದ್ರಾಭಿಷೇಕ, ಮಹಾಮಂಗಳಾರತಿ ನಡೆಯಲಿದೆ. 10:30ರ ಬಳಿಕ ಸಂಜೆ 6:30ರವರೆಗೂ ಗ್ರಹಣ ಮೋಕ್ಷ ಕಾಲದವರೆಗೂ ದೇವಾಲಯದ ಬಾಗಿಲು ಬಂದ್ ಆಗಲಿದೆ. ನಂತರದಲ್ಲಿ ಶುದ್ಧಿಕಾರ್ಯ ನಡೆದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ