LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ ಮತ್ತು ಗುಮಾಸ್ತನ ಬಂಧನ

ಬೆಳಗಾವಿ : ಖಾತಾ ವರ್ಗಾವಣೆಗೆ 5 ಲಕ್ಷ ರೂ. ಹಣ ಬೇಡಿಕೆಯಿಟ್ಟಿದ್ದ ತಹಶೀಲದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿಯ ಭೂಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ತಡರಾತ್ರಿ ನಡೆದಿದೆ.







ಜಿಲ್ಲೆಯ ಕಿತ್ತೂರು ತಹಶೀಲ್ದಾರರಾದ ಸೋಮಲಿಂಗಪ್ಪ ಹಾಲಗಿ ಹಾಗೂ ಗುಮಾಸ್ತ ಪ್ರಸನ್ನ ಜಿ ಅವರುಗಳು ದೂರುದಾರ ರಾಜೇಂದ್ರ ಇನಾಮದಾರ ಅವರ ತಂದೆಯ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಅವರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಮೊದಲ ಹಂತದಲ್ಲಿ ಎರಡು ಲಕ್ಷ ರೂ. ನೀಡುವುದು ಮತ್ತು ಉಳಿದ ಹಣದ ಶ್ಯೂರಿಟಿಯಾಗಿ 20 ಲಕ್ಷ ರೂಪಾಯಿ ಖಾಲಿ ಚೆಕ್ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು.



 ತಹಶೀಲದಾರರ ಮನೆಯಲ್ಲಿ ಮೊದಲ ಹಂತದಲ್ಲಿ ಎರಡು ಲಕ್ಷ ರೂಪಾಯಿ ಹಣ ಮತ್ತು 20 ಲಕ್ಷ ಚೆಕ್   ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ,‌ ಲಂಚದ ಹಣ ಮತ್ತು ಚೆಕ್ ಸಮೇತ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.



ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರ ಸೂಚನೆಯಂತೆ ಬೆಂಗಳೂರಿನ ಅಪರ್ ಲೋಕಾಯುಕ್ತ ಪೊಲೀಸ ಮಹಾನಿರ್ದೇಶಕರಾದ ಐಪಿಎಸ್ ಪ್ರಶಾಂತಕುಮಾರ ಠಾಕೂರ, ಬೆಳಗಾವಿಯ ಲೋಕಾಯುಕ್ತ ಪೊಲೀಸ ಅಧೀಕ್ಷಕರಾದ ಐಪಿಎಸ್ ಶ್ರೀಮತಿ ಯಶೋದಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಅನ್ನಪೂರ್ಣ ಹುಲಗೂರ ಮತ್ತು ಇತರ ಲೋಕಾಯುಕ್ತ ಪೋಲೀಸರು ಕಾರ್ಯಾಚರಣೆ ನಡೆಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ