ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾವದವರಾದ ದಿವಂಗತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಕನ್ನಡ, ಹಿಂದಿ, ಮರಾಠಿ ಮತ್ತು ಇಂಗ್ಲೀಷ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು, ಸಾರ್ವಜನಿಕರು ಮತ್ತು ಕೆಎಲ್ ಇ ಆಸ್ಪತ್ರೆ ಮಧ್ಯೆ ಪ್ರಮುಖ ಕೊಂಡಿಯಾಗಿ ಎರಡು ದಶಕಕ್ಕಿಂತಲೂ ಅಧಿಕ ಕಾಲದಿಂದ ಕೆಲಸ ನಿರ್ವಹಿಸುತ್ತಿದ್ದರು. ಅವರ ಅಕಾಲಿಕ ಅಗಲಿಕೆಯಿಂದ ಕೆಎಲ್ಇ ಆಸ್ಪತ್ರೆ ಸಿಬ್ಬಂದಿಗೆ ತೀವ್ರ ಆಘಾತವಾಗಿದ್ದು ಕೆಎಲ್ಇ ಸಂಸ್ಥೆಯ ಚೇರಮನ್ ಡಾ.ಪ್ರಭಾಕರ ಕೋರೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ರವಿವಾರ ಅಂತ್ಯಕ್ರಿಯೆ
ಶಂಕರ ಪರಸಣ್ಣವರ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸದಾಶಿವನಗರ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.