LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೆಎಲ್‌ ಇ ಆಸ್ಪತ್ರೆ ಜನಸಂಪರ್ಕಾಧಿಕಾರಿ ಶಂಕರ ಪರಸಣ್ಣವರ ಹಠಾತ್ ನಿಧನ : ರವಿವಾರ ಅಂತ್ಯಕ್ರಿಯೆ

ಬೆಳಗಾವಿ, ಅಗಸ್ಟ 30: ಬೆಳಗಾವಿಯ ಕೆಎಲ್‌ ಇ ಪ್ರಭಾಕರ ಕೋರೆ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ಶಂಕರ ಫಕೀರಪ್ಪಾ ಪರಸಣ್ಣವರ ಅವರು ಶನಿವಾರ ಮಧ್ಯಾಹ್ನ‌ 2.45ರ ಸುಮಾರಿಗೆ ತೀವ್ರ ಹೃದಯಾಘಾತದಿಂದ‌ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.



ಮೂಲತಃ ಬೈಲಹೊಂಗಲ ತಾಲೂಕಿನ ಸಂಪಗಾವದವರಾದ ದಿವಂಗತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.



ಕನ್ನಡ, ಹಿಂದಿ, ಮರಾಠಿ ಮತ್ತು ಇಂಗ್ಲೀಷ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು, ಸಾರ್ವಜನಿಕರು ಮತ್ತು ಕೆಎಲ್‌ ಇ ಆಸ್ಪತ್ರೆ ಮಧ್ಯೆ ಪ್ರಮುಖ ಕೊಂಡಿಯಾಗಿ ಎರಡು ದಶಕಕ್ಕಿಂತಲೂ ಅಧಿಕ ಕಾಲದಿಂದ ಕೆಲಸ ನಿರ್ವಹಿಸುತ್ತಿದ್ದರು. ಅವರ ಅಕಾಲಿಕ ಅಗಲಿಕೆಯಿಂದ ಕೆಎಲ್‌ಇ  ಆಸ್ಪತ್ರೆ ಸಿಬ್ಬಂದಿಗೆ ತೀವ್ರ ಆಘಾತವಾಗಿದ್ದು ಕೆಎಲ್ಇ ಸಂಸ್ಥೆಯ ಚೇರಮನ್ ಡಾ.ಪ್ರಭಾಕರ ಕೋರೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.



ರವಿವಾರ ಅಂತ್ಯಕ್ರಿಯೆ



ಶಂಕರ ಪರಸಣ್ಣವರ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸದಾಶಿವನಗರ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ