LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ದಿ. 5ರಿಂದ ಮೂಡಲಗಿಯಲ್ಲಿ ಮೂರು ದಿನ ಕೃಷಿಮೇಳ : ಕೃಷ್ಣಾ ನಾಶಿ

ಮೂಡಲಗಿ : ಪಟ್ಟಣದ ನವರಾತ್ರಿ ಉತ್ಸವ ಕಮೀಟಿಯಿಂದ 9 ದಿನಗಳ ನವರಾತ್ರಿ ಉತ್ಸವದ ಅಂಗವಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಬರ್ಡ್ಸ ತುಕ್ಕಾನಟ್ಟಿ ಹಾಗೂ ಶಿವಬೋಧರಂಗ ಪಿಕೆಪಿಎಸ್, ನಿಸರ್ಗ ಫೌಂಡೇಶನ್ ಮೂಡಲಗಿ ಇವರ ಸಹಯೋಗದೊಂದಿಗೆ ಕೃಷಿ ಮೇಳವನ್ನು ಅಕ್ಟೋಬರ 5, 6, 7 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ದ್ವಿತೀಯ ಬಾರಿಗೆ ಆಯೋಜಿಸಲಾಗಿದೆ ಎಂದು ಉತ್ಸವ ಕಮೀಟಿಯ ಕೃಷ್ಣಾ ನಾಶಿ ಹೇಳಿದರು.



ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವರ್ಗಕ್ಕೆ ಉಪಯೋಗವಾಗುಂತ ಸಲಕರಣೆಗಳು, ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಸಾವಯುವ ಕೃಷಿ, ಸಿರಿಧಾನ್ಯಗಳ ಉತ್ಪಾದನೆ, ವಿಜ್ಞಾನ ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಜಾನುವಾರುಗಳ ಪ್ರದರ್ಶನ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕ, ಜೇನು ಕೃಷಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಈ ಭಾಗದ ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದರು.



ಈರಪ್ಪ ಢವಳೇಶ್ವರ ಮಾತನಾಡಿ, ಕೃಷಿ ಮೇಳದಲ್ಲಿ ಉತ್ತಮ ರಾಸುಗಳ ಪ್ರದರ್ಶನ, ಕಿಲಾರಿ ಆಕಳ ಪ್ರದರ್ಶನ, ಟಗರಿನ ಕಾದಾಟ, ರಂಗೋಲಿ ಸ್ಪರ್ಧೆ, ಬಲೂನ್ ಸ್ಪರ್ಧೆ, ಕಣ್ಣು ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ, ಬಾಳೆ ಹಣ್ಣು ತಿನ್ನುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಹಾಗೂ ವಿವಿಧ ಜಿಲ್ಲೆಗಳಿಂದ ರೈತಬಾಂಧವರು ಮೂರು ದಿನದ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದ್ವೀತಿಯ ಕೃಷಿ ಮೇಳವನ್ನು ಯಶಸ್ವಿಯಾಗಿಸಲು ಸಹಕರಿಸಬೇಕೆಂದು ಮತ್ತು ಹೆಚ್ಚಿನ ಮಾಹಿತಿಗಾಗಿ ಮೊ.9590718444, 9008846822ಗೆ ಸಂಪರ್ಕಿಸಿರಿ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ