LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸುಳ್ಳು ಪ್ರಚಾರಕ್ಕೆ ಸರ್ಕಾರದ ಆಡಳಿತ ಯಂತ್ರ ಬಳಕೆ: ಪ್ರಧಾನಿ ವಿರುದ್ಧ ರಾಷ್ಟ್ರಪತಿಗೆ ಪತ್ರ

ಬೆಂಗಳೂರು: ಚುನಾವಣಾ ಗುಂಗಿನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ಸಹ ವಿರೋಧ ಪಕ್ಷಗಳನ್ನು ಹಣಿಯಲಿಕ್ಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು, ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.



ಸಿಕಲ್ ಸೆಲ್ ರಕ್ತಹೀನ ನಿವಾರಣೆ ಮಿಷೆನ್ ಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮವನ್ನು ಪ್ರಧಾನಿ ಮೋದಿಯವರು ವಿಪಕ್ಷಗಳ ವಿರುದ್ಧ ಕಿಡಿಕಾರಲು ಬಳಸಿಕೊಂಡರು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.



ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಪ್ರಧಾನಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯದ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ನಮಗೆ ಆಹ್ವಾನಿಸಿತ್ತು. ರಾಜ್ಯದ ಆರೋಗ್ಯ ಸಚಿವನಾಗಿ ನಾನು ವಿಕಾಸ ಸೌಧದಿಂದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದೆ. ಆದರೆ ಮೋದಿಯವರು ಯಾರೊಂದಿಗೂ ಚರ್ಚಿಸದೇ ವಿರೋಧ ಪಕ್ಷಗಳನ್ನು ದೂಷಿಸುವ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಜನರಿಗೆ, ವಿಶೇಷವಾಗಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳ ಜನರಿಗೆ ಅನುಕೂಲವಾಗುವಂತಹ ಯಾವುದೇ ಕೆಲಸವನ್ನು ಮಾಡುತ್ತಿಲ್ಲ ಎಂದು ಪ್ರಧಾನಿ ಆರೋಪಿಸಿದರು ಎಂದು ಗುಂಡೂರಾವ ದೂರಿದ್ದಾರೆ.



ದೇಶದಲ್ಲಿ 70 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್, ಎಲ್ಲರಿಗೂ ಉಚಿತ ಪಡಿತರ, ಕೈಗೆಟುಕುವ ಆರೋಗ್ಯ ಮತ್ತು ಉದ್ಯೋಗ ಖಾತರಿಪಡಿಸಲು ಸಾಧ್ಯವಾಗಲಿಲ್ಲ. ಒಂದು ರಾಜ್ಯದಲ್ಲಿ ಉಚಿತ್ ವಿದ್ಯುತ್ ಘೋಷಣೆ ಮಾಡಿ ಜೊತೆಗೆ ವಿದ್ಯುತ್ ದರವನ್ನೂ ಹೆಚ್ಚಳ ಮಾಡಿತು. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು, ಘೋಷಣೆಗಳು ಸುಳ್ಳುಗಳಾಗಿವೆ. ದೇಶದ ಜನತೆ ಸುಳ್ಳು ಭರವಸೆಗಳ ಬಗ್ಗೆ ಎಚ್ಚರದಿಂದಿರಬೇಕೆಂದು ಅವರು ಹೇಳಿದ್ದಾರೆ.



ಸರ್ಕಾರಿ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ ದೂಷಿಸುವುದು ಎಷ್ಟು ಸರಿ? ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಮೋದಿ ಸುಳ್ಳು ಪ್ರಚಾರ ಮಾಡಿದ್ದಾರೆ. ಪ್ರತಿಯೊಬ್ಬ ಪ್ರಜೆಯೂ ರಾಜಕೀಯ ವೇದಿಕೆಗಳಲ್ಲಿ ತಮ್ಮ ರಾಜಕೀಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವತಂತ್ರರು. ಆದರೆ ಪ್ರಧಾನಿಯೊಬ್ಬರು ಸರ್ಕಾರಿ ಸಮಾರಂಭದಲ್ಲಿ ರಾಜಕೀಯ ಪೂರ್ವಗ್ರಹಗಳನ್ನು ವ್ಯಕ್ತಪಡಿಸುವುದು ಅಕ್ಷಮ್ಯ ಎಂದು ಪತ್ರದಲ್ಲಿ ಗುಂಡೂರಾವ್ ಬರೆದಿದ್ದಾರೆ.



ಕಾರ್ಯಕ್ರಮದ ಪ್ರಾರಂಭದಲ್ಲಿ ಮೋದಿಯವರು ಪೀಡಿತ ಜನರು ಮತ್ತು ಮಿಷನ್ ಕಾರ್ಯತಂತ್ರದ ಬಗ್ಗೆ ಭಾಷಣ ಮಾಡಬೇಕಿತ್ತು. ಆದರೆ ಜನರ ಸಮಸ್ಯೆಗಳ ಬಗ್ಗೆ ಪ್ರಧಾನಿ ಗಮನಹರಿಸಲಿಲ್ಲ. ಬದಲಾಗಿ, ಅವರು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿಯಲ್ಲಿಯೇ ಸಮಯವನ್ನು ವ್ಯರ್ಥ ಮಾಡಿದರು.



2024 ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ರಾಜಕೀಯ ಭಾಷಣಗಳಿಗೆ ಸರ್ಕಾರದ ಆಡಳಿತಯಂತ್ರ ಬಳಕೆಗೆ ಅವಕಾಶ ನೀಡಬಾರದು ಎಂದು ಸಚಿವರು ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ