LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಪತಿಯ ಕೊಳೆತ ಮೃತದೇಹದ ಜೊತೆ 10 ದಿನ ವಾಸ!

ಚಿಕ್ಕಮಗಳೂರು, ಏಪ್ರಿಲ್ 09 : ಪತಿ ಮೃತಪಟ್ಟಿರುವುದರ ಅರಿವಿಲ್ಲದೆ ಅವರ ಕೊಳೆತ ಮೃತದೇಹದೊಂದಿಗೆ ಮಾನಸಿಕ ಅಸ್ವಸ್ಥೆಯಾಗಿರುವ ಪತ್ನಿಯೊಬ್ಬರು ಸುಮಾರು ಹತ್ತು ದಿನಗಳ ಕಾಲ ಕಳೆದ ಹೃದಯವಿದ್ರಾವಕ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಣಕಲ್‌ನಲ್ಲಿ ಬೆಳಕಿಗೆ ಬಂದಿದೆ.


77 ವರ್ಷದ ಸಿರಿಲ್ ಮೋನಿಸ್ ಅನಾರೋಗ್ಯದಿಂದ ಸುಮಾರು ಹತ್ತು ದಿನಗಳ ಹಿಂದೆ ಮನೆಯೊಳಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಆದರೆ ಅವರ ಪತ್ನಿ ಮಾನಸಿಕ ಅಸ್ವಸ್ಥರಾಗಿದ್ದರಿಂದ ಪತಿ ಸಾವನ್ನಪ್ಪಿರುವುದನ್ನು ಗಮನಿಸದೆ ಅದೇ ಮನೆಯಲ್ಲಿ ದಿನಗಳನ್ನು ಕಳೆದಿರುವುದು ತಿಳಿದುಬಂದಿದೆ.


ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ಅನುಮಾನಗೊಂಡು ಬುಧವಾರ ಮನೆಗೆ ಹೋಗಿ ಪರಿಶೀಲನೆ ನಡೆಸಿದಾಗ ಘಟನೆ ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಸಿರಿಲ್ ಮೋನಿಸ್ ಸುಮಾರು ಹತ್ತು ದಿನಗಳ ಹಿಂದೆಯೇ ಮೃತಪಟ್ಟಿರುವುದು ದೃಢಪಟ್ಟಿದೆ.


ಸಿರಿಲ್ ಮೋನಿಸ್ ಅವರಿಗೆ ಇಬ್ಬರು ಮಕ್ಕಳು ಇದ್ದು, ಪುತ್ರಿ ವಿದೇಶದಲ್ಲಿ ಶಿಕ್ಷಕಿಯಾಗಿದ್ದರೆ, ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾನೆ. ದಂಪತಿಗಳು ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು.


ಪುತ್ರ ಪ್ರತಿದಿನ ತಾಯಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದರೂ, ತಂದೆಯ ಬಗ್ಗೆ ವಿಚಾರಿಸಿದಾಗ ‘ಅವರು ಚೆನ್ನಾಗಿದ್ದಾರೆ’ ಎಂದು ತಾಯಿ ಹೇಳುತ್ತಿದ್ದುದಾಗಿ ತಿಳಿದುಬಂದಿದೆ.


ಸುಮಾರು 15 ದಿನಗಳ ಹಿಂದೆ ಮನೆಗೆ ಬಂದಿದ್ದ ಪುತ್ರ ನಾಲ್ಕು ದಿನಗಳ ನಂತರ ಹಿಂದಿರುಗಿದ್ದನು. ಆ ಬಳಿಕ ಈ ದುರ್ಘಟನೆ ಸಂಭವಿಸಿರುವುದು ತಿಳಿದುಬಂದಿದೆ.


ಕೊಳೆತಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲು ಸಮಾಜ ಸೇವಕ ಆರಿಫ ನೆರವಾಗಿದ್ದಾರೆ. ಸಂಜೆ ವೇಳೆ ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ