LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಆದಾಯಕ್ಕಿಂತ ಹೆಚ್ಚು ಆಸ್ತಿ: ವಿಜಯೇಂದ್ರ ಪತ್ನಿ ಸಹೋದರ ಮೇಲೆ ಲೋಕಾಯುಕ್ತ ದಾಳಿ

ಯಾದಗಿರಿ, ೫: ಬಿಜೆಪಿ ರಾಜ್ಯಾಧ್ಯಕ್ಷ  ವಿಜಯೇಂದ್ರ ಅವರ ಪತ್ನಿಯ ಸಹೋದರ ಡಾ ಪ್ರಭುಲಿಂಗ ಮಾನ್ಕರ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಡಾ ಮಾನ್ಕರ ಅವರು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಅಧಿಕಾರಿಯಾಗಿದ್ದು ಅವರ ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಮನೆ, ಹೊರವಲಯದ ಫಾರ್ಮ ಹೌಸ್ ಮತ್ತು ಯಾದಗಿರಿ ಆರೋಗ್ಯ ಮತ್ತು ಕಲ್ಯಾಣ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.



ಬಲ್ಲ ಮೂಲಗಳ ಆದಾಯಕ್ಕಿಂತ ಭಾರಿ ಆಸ್ತಿಯನ್ನು ಡಾ ಪ್ರಭುಲಿಂಗ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿರುವರೆಂದು ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತ ಎಸ್ ಪಿ ಕರ್ನೂಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದ್ದು ವಿವರಗಳು ಇನ್ನೂ ಲಭ್ಯವಾಗಬೇಕಿದೆ.



ಈ ಹಿಂದೆ ಕಲಬುರಗಿಯ ಆರ್‌ಸಿಎಚ್ ಆಗಿದ್ದು, ಈಗ ಯಾದಗಿರಿಯ ಡಿಎಚ್‌ಒ ಆಗಿರುವ ಡಾ.ಪ್ರಭುಲಿಂಗ ಅವರ ಮನೆ‌ಯ ಮೇಲೆ‌ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಈ ದಾಳಿ ನಡೆಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ