LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತ; ಲೋಕಾಯುಕ್ತ ಡಿಎಸ್ ಪಿ ಸಾವು

ವಿಜಯಪುರ : ವಿಜಯಪುರದ ಉಪ ಲೋಕಾಯುಕ್ತ ವರಿಷ್ಠಾಧಿಕಾರಿ ಅರುಣ ನಾಯಕ ಅವರು ಬ್ಯಾಡ್ಮಿಂಟನ್ ಆಡುವಾಗ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಅವರಿಗೆ 58 ವರುಷ ವಯಸಾಗಿತ್ತು.



ಬುಧವಾರ ಸಂಜೆ ಕೆಲಸದ ಅವಧಿ ಮುಗಿದ ನಂತರ ಯಥಾ ಪ್ರಕಾರ ಸ್ನೇಹಿತರೊಂದಿಗೆ ಅವರು ಬ್ಯಾಡ್ಮಿಂಟನ್ ಆಟವಾಡುತ್ತಿದ್ದರು. ಆಗ ಏಕಾಎಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ವಿಜಯಪುರ ನರ್ಸಿಂಗ್ ಹೋಮಗೆ ಸೇರಿಸಲಾಯಿತು. ಆದರೆ ರಾತ್ರಿ ಸುಮಾರು 8.30ಕ್ಕೆ ಅವರು ಕೊನೆಯುಸಿರೆಳೆದರು. ಅವರನ್ನು ಪರೀಕ್ಷಿಸಿದ ವೈದ್ಯರು ಅವರಿಗೆ ಆಟವಾಡುವಾಗ ಹೃದಯಾಘಾತವಾಗಿತ್ತು ಎಂದು ತಿಳಿಸಿದ್ದಾರೆ.



ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ನಾಯಕ ಅಗಲಿದ್ದಾರೆ. ನಾಯಕ ಅವರ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಅಲ್ಲಿಯೇ ಇದ್ದರು.



ಮಾಹಿತಿ ದೊರೆತ ತಕ್ಷಣ ವಿಜಯಪುರಕ್ಕೆ ಧಾವಿಸಿದ ಎಲ್ಲರೂ ನಾಯಕ ಅವರ ಪಾರ್ಥಿವ ಶರೀರವನ್ನು ಅವರ ಸ್ವಸ್ಥಳವಾದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ತೆಗೆದುಕೊಂಡು ಹೋಗಿ ಗುರುವಾರ ಮುಂಜಾನೆ ಅಂತಿಮ ವಿಧಿ ನಿರ್ವಹಿಸಿದರು. ಲೋಕಾಯುಕ್ತ ಕಚೇರಿಯ ಅನೇಕ ಅವರ ಸಹೋದ್ಯೋಗಿಗಳು ಅಂತಿಮ ವಿಧಿಯಲ್ಲಿ ಭಾಗವಹಿಸಿದ್ದರು.



ಲೋಕಾಯುಕ್ತ  ಡಿಎಸ್ ಪಿ ಆಗಿದ್ದ ನಾಯಕ ಅವರು 17-1-2022 ರಂದು ವಿಜಯಪುರಕ್ಕೆ ವರ್ಗಾವಣೆಯಾಗಿ ಬಂದಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ