ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು 

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.

ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.

 

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.