ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಾರಿಕ್, ಮಾಜ್ ಮನೆ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಶಾರಿಕ್ ಹಾಗೂ ಮಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಟಾಕೀಸ್ ರಸ್ತೆಯಲ್ಲಿರುವ 4 ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ತೀರ್ಥಹಳ್ಳಿ ಇನ್ಸ್ ಪೆಕ್ಟರ್ ಅಶ್ವತ್ಥ ಗೌಡ, ಮಾಳೂರು ಸಿಪಿಐ ಪ್ರವೀಣ್, ಆಗುಂಬೆ ಪಿಎಸ್ ಐ ಶಿವಕುಮಾರ್, ಮಾಳೂರು ಪಿ ಎಸ್ ಐ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಚ್ ವಾರೆಂಟ್ ಪಡೆದು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.