ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಕಂಬಿ ಗ್ರಾಮದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟ ಇಬ್ಬರ ಸಾವು

 

ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ
ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಬುಧವಾರ ಮಧ್ಯಾಹ್ನ 2 ಗಂಟೆಗೆ ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಸಿ ಪದಾರ್ಥ (ಮಳ್ಳಿ) ಮೈಮೇಲೆ ಬಿದ್ದು ಗಾಯವಾಗಿದೆ. ದೂರು ಆಧರಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.