LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
International News

ಮೆಲೋನಿ ಇನ್‌ಸ್ಟಾಗ್ರಾಂನಲ್ಲಿ ಮೋದಿ ರಾಜೀನಾಮೆಗೆ ಒತ್ತಾಯ; ವಿದ್ಯಾರ್ಥಿಗಳ ಅಭಿಯಾನ ವೈರಲ್

ಹೊಸದಿಲ್ಲಿ, ಜುಲೈ 24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟದ ನಡುವೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಇದೀಗ ಅಂತರರಾಷ್ಟ್ರೀಯ ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರತಿಧ್ವನಿಸುತ್ತಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರಧಾನಿ ಮೋದಿಗೆ ರಾಜೀನಾಮೆ ನೀಡುವಂತೆ ತಿಳಿಸುವಂತೆ ನೆಟ್ಟಿಗರು ಮತ್ತು ವಿದ್ಯಾರ್ಥಿಗಳ ಬೆಂಬಲಿಗರು ಕಾಮೆಂಟ್‌ಗಳ ಮೂಲಕ ಆಗ್ರಹಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಜುಲೈ 20ರಂದು ನಡೆದ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಉಲ್ಲೇಖಿಸಿ ಮೆಲೋನಿ ಅವರ ಇತ್ತೀಚಿನ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಬಂದಿವೆ.

"ದಯವಿಟ್ಟು ಪ್ರಧಾನಿ ಮೋದಿ ಅವರಿಗೆ ಭಾರತದ ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವಂತೆ ಹೇಳಿ", "ಮೋದಿ ರಾಜೀನಾಮೆ ನೀಡಬೇಕು", "ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಿ" ಎಂಬಂತಹ ಸಂದೇಶಗಳನ್ನು ಅನೇಕರು ಕಾಮೆಂಟ್ ಮಾಡಿದ್ದಾರೆ.

ಈ ನಡುವೆ, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಹೊಣೆಗಾರಿಕೆ ನಿಗದಿಪಡಿಸುವುದು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ ಬಳಿಕ ಸೋನಮ್ ವಾಂಗ್ಚುಕ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ