LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಚಿವ ಉಮೇಶ ಕತ್ತಿ ನಿಧನ

ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಸಚಿವ ಉಮೇಶ ಕತ್ತಿ ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.



ಬೆಂಗಳೂರಿನ ಡಾಲರ್ಸ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾಥ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.



ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ ಬೆಳಗಾವಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ‌ 14ರಂದು ಜನಿಸಿದ್ದ ಉಮೇಶ್‌ ಕತ್ತಿ ಅವರು ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಅವರನ್ನು ಅಗಲಿದ್ದಾರೆ.



ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಒಲವು ಹೊಂದಿದ್ದ ಉಮೇಶ ಕತ್ತಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಪಾರ ರಾಜಕೀಯ ಅನುಭವ ಹೊಂದಿದ್ದ ಉಮೇಶ ಕತ್ತಿ ಅವರು ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ತಾವು ಒಂದಲ್ಲ ಒಂದು ದಿನ ನಾನು ಮುಖ್ಯಮಂತ್ರಿಯಾಗುವುದಾಗಿ ಸತತವಾಗಿ ಹೇಳುತ್ತಿದ್ದರು.



ತಮ್ಮ ಸಂಪುಟ ಸಹೋದ್ಯೋಗಿ ಉಮೇಶ ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ



ತಂದೆ ವಿಶ್ವನಾಥ ಕತ್ತಿಯವರಂತೆ ಉಮೇಶ ಕತ್ತಿ ಅವರು ಅಕಾಲಿಕ ಮರಣ ಹೊಂದಿದ್ದಾರೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ