ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರವಾದಿಗಳ ಅವಹೇಳನ : ಬಿಜೆಪಿಯಿಂದ ಶಾಸಕ ಅಮಾನತ್ತು

ಹೈದ್ರಾಬಾದ‌ : ಪ್ರವಾದಿ ಮಹಮ್ಮದರ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಟಿ. ರಾಜಾ ಸಿಂಗನನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 10 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ. ಈ ಹಿಂದೆ ಪ್ರವಾದಿ ಮೊಹಮ್ಮದ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಹೈದರಾಬಾದ್‌ನಲ್ಲಿ ರಾಜಾರನ್ನು ಪೊಲೀಸರು ಬಂಧಿಸಿದ್ದರು.

ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ, ಸೋಮವಾರ ರಾತ್ರಿ ಹೈದರಾಬಾದ್‌ನ ಹಲವು ಭಾಗಗಳಲ್ಲಿ ಹಲವಾರು ಸಮುದಾಯದವರು ಪ್ರತಿಭಟನೆ ನಡೆಸಿದ್ದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೂಲಗಳು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಹಲವಾರು ಪಕ್ಷದ ಶಾಸಕರು ಮತ್ತು ಕೌನ್ಸಿಲರ್‌ಗಳು ಪೊಲೀಸ್ ಠಾಣೆಗಳನ್ನು ತಲುಪಿ, ಅಲ್ಲಿ ಪ್ರತಿಭಟನೆ ನಡೆಸಿದರು ಮತ್ತು ರಾಜಾ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.