LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸಂಪೂರ್ಣ ಹದಗೆಟ್ಟ ರಸ್ತೆಯಲ್ಲಿ ಕುಳಿತು ಸ್ನಾನ ಮಾಡಿದ ಶಾಸಕಿ

ರಾಂಚಿ, ೨೨- ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡ, ಗುಂಡಿಗಳಿಂದ ಬೇಸತ್ತ ಕಾಂಗ್ರೆಸ್ ಶಾಸಕಿಯೊಬ್ಬರು ರಸ್ತೆಯ ಹೊಂಡದ ನೀರಿನಲ್ಲಿ ಸ್ನಾನ ಮಾಡಿದ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.



ಕಾಂಗ್ರೆಸ್ ಶಾಸಕಿ ದೀಪಿಕಾ ಪಾಂಡೆ ಅವರು ಗೊಡ್ಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಸ್ನಾನ ಮಾಡಿದರು.  ರಾಷ್ಟ್ರೀಯ ಹೆದ್ದಾರಿ ೧೩೩ ಹೊಂಡಗುಂಡಿಗಳಿಂದ ತುಂಬಿದ್ದು, ಮಳೆಯಿಂದಾಗಿ ಇಲ್ಲಿ ನೀರು ತುಂಬಿ ಈಜುಕೊಳದಂತಾಗಿತ್ತು. ರಸ್ತೆಯ ಅವ್ಯವಸ್ಥೆಯಿಂದ ಬೇಸತ್ತ ಶಾಸಕಿ ಕೂಡಲೇ ರಸ್ತೆ ದುರಸ್ಥಿಗೆ ಆಗ್ರಹಿಸಿ ಹೀಗೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.



ಮಹಾಗಾಮ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ದೀಪಿಕಾ ಪಾಂಡೆ ಸಿಂಗ್ ಅವರು ರಸ್ತೆಯಲ್ಲಿರುವ ಹೊಂಡಕ್ಕೆ ಇಳಿದು ತಲೆಯಿಂದ ಕಾಲಿನವರೆಗೆ ಹೊಂಡದಲ್ಲಿ ತುಂಬಿದ ಕೆಸರು ನೀರನ್ನು ಸುರಿದುಕೊಂಡು ಸ್ನಾನ ಮಾಡಿದ್ದರು. ರಸ್ತೆ ಹೊಂಡದಲ್ಲಿ ಮುಳುಗೆದ್ದು ಇವರು ಸ್ನಾನ ಮಾಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



ತಮ್ಮ ಈ ಪ್ರತಿಭಟನೆ ಬಗ್ಗೆ ಮಾತನಾಡಿದ ದೀಪಿಕಾ ಸಿಂಗ್ ಅವರು,  ಇದು ರಾಷ್ಟ್ರೀಯ ಹೆದ್ದಾರಿ 133, ಈ ಹೆದ್ದಾರಿ ಪ್ರಾಧಿಕಾರದವರು ರಸ್ತೆಯನ್ನು ರಿಪೇರಿ ಮಾಡಲು ಮೇ ತಿಂಗಳಲ್ಲಿ ಜವಾಬ್ದಾರಿ ತೆಗೆದುಕೊಂಡಿದ್ದರು. ಆದರೆ ಕೇಂದ್ರ ಸರ್ಕಾರ ಈ ಕಾರ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ. ಆದರೆ ಈ ಹಾಳಾದ ರಸ್ತೆಯಿಂದ ಜನರು ಸಂಕಷ್ಟಕ್ಕೊಳಗಾಗಿದ್ದು, ಕೂಡಲೇ ಈ ರಸ್ತೆಯನ್ನು ಸರಿಪಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.



ರಸ್ತೆಯಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಲೇ ಇವೆ. ಇದರಿಂದ ವಾಹನ ಸವಾರರು ಪರದಾಟ ನಡೆಸ್ತಿದ್ದಾರೆ ಎಂದು ಅವರು ಆರೋಪಿಸಿದರು.



https://twitter.com/DipikaPS/status/1572459144099303424?t=11kwam0eD5VBLRsjVkfaGg&s=19

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ