LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೊಬೈಲ್ ನಿಷೇಧ

ಮುಂಬೈ : ಮಹಾರಾಷ್ಟ್ರದ ಯವತಮಾಲ್ ಜಿಲ್ಲೆಯ ಪುಸಾದ್ ತಾಲೂಕಿನ ಹಳ್ಳಿಯೊಂದರಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲಾಗಿದೆ.



ಪುಸಾದ್ ತಾಲೂಕಿನ ಬನ್ಸಿ ಗ್ರಾಮಸ್ಥರು ಸೇರಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಕೋವಿಡ್​ 19 ಸಾಂಕ್ರಾಮಿಕದ ಸಮಯದಲ್ಲಿ ಆನ್ಲೈನ್ ಶಿಕ್ಷಣಕ್ಕಾಗಿ ಮಕ್ಕಳು ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದ್ದರು.



ಈಗ ಮೊಬೈಲ್​ ನೋಡುವುದು ಅತಿಯಾಗಿದೆ. ವಿವಿಧ ವೆಬಸೈಟ್ ವೀಕ್ಷಿಸುವುದು ಮತ್ತು ಆನಲೈನ್ ಆಟಗಳನ್ನು ಆಡುತ್ತಾ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗೆಯೇ ಮುಂದುವರೆದರೆ ಶೀಘ್ರದಲ್ಲೇ ಮೊಬೈಲ್​ ವ್ಯಸನಿಗಳಾಗುತ್ತಾರೆ. ಹೀಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗ್ರಾಮದ ಸರಪಂಚ್​ ಗಜಾನನ ಟೆಲಿ ತಿಳಿಸಿದ್ದಾರೆ.



ಮೊಬೈಲ್​ ಅತಿಯಾದ ಬಳಕೆಯನ್ನು ತಪ್ಪಿಸಲು ಈ ಕ್ರಮ ಸೂಕ್ತ. ಆರಂಭದಲ್ಲಿ ಸಮಸ್ಯೆ ಉಂಟಾಗಬಹುದು. ಈ ಕುರಿತು ಪೋಷಕರು ಮತ್ತು ಮಕ್ಕಳಿಬ್ಬರಿಗೂ ಸಲಹೆ ನೀಡಲಾಗುವುದು. ಕೌನ್ಸೆಲಿಂಗ್ ಮಾಡಿದ ನಂತರವೂ ಮಕ್ಕಳು ಮೊಬೈಲ್ ಬಳಸುವುದು ಕಂಡು ಬಂದರೆ ನಾವು ದಂಡ ವಿಧಿಸುತ್ತೇವೆ. ಮಕ್ಕಳು ಮತ್ತೆ ಅಧ್ಯಯನಕ್ಕೆ ಹೋಗುವಂತೆ ಮಾಡುವುದು ಹಾಗೂ ಮೊಬೈಲ್ ಫೋನ್ಗಳಿಗೆ ಅಂಟಿಕೊಂಡು ವಿಚಲಿತರಾಗದಂತೆ ಮಾಡುವುದು ಇದರ ಉದ್ದೇಶ ಎಂದು ಹೇಳಿದರು.



ಈ ವರ್ಷದ ಸ್ವಾತಂತ್ರ್ಯ ದಿನದಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೋಹಿತ್ಯಂಚೆ ವಡಗಾಂವ ಗ್ರಾಮದಲ್ಲಿಯೂ ಸಹ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ