LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮೂಲಭೂತ ಸೌಕರ್ಯಗಳ ಸುಧಾರಣೆಗೆ ಆದ್ಯತೆ : ಮೋದಿ

ಮಂಗಳೂರು : ಮೂಲಭೂತ ಸೌಕರ್ಯಗಳ ಸುಧಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದ್ದು, 3700 ಕೋಟಿ ರೂ. ಮೊತ್ತದ ಹೊಸ ಯೋಜನೆಯೊಂದಿಗೆ ನವ ಮಂಗಳೂರು ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.



ಮಂಗಳೂರಿನ ಗೋಲ್ಡನ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿಶ್ವ ದರ್ಜೆ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ಹಾಗೂ ಅತ್ಯುತ್ತಮ ರೀತಿಯಲ್ಲಿ ಬಂದರುಗಳ ಸಂಪರ್ಕತೆ ಹೊಂದಲು ಸರ್ಕಾರ ಒತ್ತು ನೀಡುತ್ತಿದೆ ಎಂದರು.



ಜನರ ಜೀವನ ಮಟ್ಟು ಸುಧಾರಿಸಲು ಹಾಗೂ ದೇಶದ ಆರ್ಥಿಕ ಪ್ರಗತಿಯನ್ನು ಸಾಧಿಸಲು ಡಬಲ್ ಎಂಜಿನ್ ಸರ್ಕಾರ ನೆರವಾಗುತ್ತಿದೆ. ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಹೊಸ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು.



ಐತಿಹಾಸಿಕ ಮಂಗಳೂರು ಬಂದರನ್ನು ಮೇಲ್ದರ್ಜೆಗೇರಿಸಿ ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ, ಮೀನುಗಾರರು ತಮ್ಮ ಮೀನುಗಳನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು ಎಂದರು.



ಕಳೆದ 8 ವರ್ಷಗಳಲ್ಲಿ ದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸಾಗರಮಾಲಾ ಯೋಜನೆಯಿಂದ ಕರಾವಳಿಯಲ್ಲಿ ಮೂಲಸೌಕರ್ಯವನ್ನು ಬಲಗೊಳಿಸಲಾಗುತ್ತಿದೆ. ಸರಕಾರದ ಪ್ರಯತ್ನದಿಂದ ಕಳೆದ 8 ವರ್ಷಗಳಲ್ಲಿ ಮಂಗಳೂರು ಬಂದರಿನಲ್ಲಿ ವ್ಯಾಪಾರ ಚಟುವಟಿಕೆಗಳು ದ್ವಿಗುಣಗೊಂಡಿದೆ ಎಂದು ಪ್ರಧಾನಿ ಹೇಳಿದರು.



ದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ ಮತ್ತು ಕರ್ನಾಟಕದಲ್ಲಿ 8 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಅನುಮೋದಿಸಲಾಗಿದೆ. ಸುಮಾರು 30 ಲಕ್ಷ ಗ್ರಾಮೀಣ ಕುಟುಂಬಗಳು ಪೈಪ್‌ಲೈನ್‌ನಲ್ಲಿ ನೀರು ಪಡೆಯುತ್ತಿವೆ ಎಂದು ಅವರು ತಿಳಿಸಿದರು.



ಆಯುಷ್ಮಾನ ಭಾರತ ಯೋಜನೆಯು 4 ಕೋಟಿ ಬಡ ಕುಟುಂಬಗಳಿಗೆ ಉಚಿತ ಚಿಕಿತ್ಸೆಗೆ ಸಹಾಯ ಮಾಡಿದೆ ಮತ್ತು ಕರ್ನಾಟಕದಲ್ಲಿ 30 ಲಕ್ಷ ಬಡವರು ಇದರ ಪ್ರಯೋಜನ ಪಡೆದಿದ್ದಾರೆ. ಪಿಎಂ ಸ್ವ-ನಿಧಿ ಯೋಜನೆಯಿಂದ 2 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಹಾಯವಾಗಲಿದೆ. ಮೆಟ್ರೊ ಸಂಪರ್ಕ ಹೊಂದಿರುವ ನಗರಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದರು.



ಗ್ರಾಮೀಣ ಮಟ್ಟದಲ್ಲಿ 6 ಲಕ್ಷ ಕಿಲೋಮೀಟರ್ ಆಪ್ಟಿಕಲ್ ಫೈಬರ್ ಇಂಟರ್ನೆಟ್ ಸಂಪರ್ಕವನ್ನು ಒದಗಿಸಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಕುಶಲಕರ್ಮಿಗಳು, ಆಟೋ ರಿಕ್ಷಾ ಟ್ಯಾಕ್ಸಿ ಚಾಲಕರು ಇತ್ಯಾದಿಗಳಿಗೆ ನೆರವಾಗಲಿದೆ. ಜಾಗತಿಕ ಅಡೆತಡೆಗಳ ನಡುವೆಯೂ ನಾವು 670 ಶತಕೋಟಿ ಡಾಲರ್ ಅಥವಾ 50 ಲಕ್ಷ ಕೋಟಿ ಮೌಲ್ಯದಷ್ಟು ರಫ್ತು ಮಾಡಬಹುದು ಎಂದು ಪ್ರಧಾನಿ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ