LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಗುಜರಾತ್ ಮೆಟ್ರೋ ರೈಲು ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಗುಟ್ಕಾ ಉಗಿದ ಜನ; ವಿಡಿಯೋ ನೋಡಿ ನೆಟ್ಟಿಗರ ತರಾಟೆ

ಅಹಮದಾಬಾದ, ೧೭- ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರು ಬಹುವಾಗಿ ಇಷ್ಟಪಡುತ್ತಾರೆ. ನಿಲ್ದಾಣದಲ್ಲಿನ ಸ್ವಚ್ಛತೆ, ಟ್ರಾಫಿಕ್ ಕಿರಿಕಿರಿ ಇಲ್ಲದೆ ತಾವು ಹೋಗಬೇಕಾದ ಸ್ಥಳವನ್ನು ಬಹುಬೇಗ ತಲುಪುವುದು ಇತ್ಯಾದಿಗಳ ಕಾರಣಕ್ಕೆ ಮಹಾನಗರಗಳಲ್ಲಿ ಮೆಟ್ರೋ ರೈಲಿಗೆ ಪ್ರಾಶಸ್ತ್ಯ ನೀಡುವುದು ಹೆಚ್ಚು.



ಜಗತ್ತಿನಾದ್ಯಂತ ನಗರಗಳಲ್ಲಿ ಅಲ್ಲದೇ ಬೆಂಗಳೂರು, ಕೊಲ್ಕತ್ತಾ, ದೆಹಲಿ, ಅಹ್ಮದಾಬಾದ ಮತ್ತು ಲಕ್ನೋದ ನಗರಗಳಲ್ಲಿ ಮೆಟ್ರೋ ರೈಲುಗಳು ಅಲ್ಲಿನ ಜನತೆಯ ಅವಿಭಾಜ್ಯ ಅಂಗಗಳಾಗಿವೆ. ಆದರೆ ಕೆಲವೊಂದು ವ್ಯಕ್ತಿಗಳ ದುರ್ವರ್ತನೆ ಅಸಹನೀಯವಾಗಿರುತ್ತದೆ. ಮದ್ಯಪಾನ ಮಾಡಿಕೊಂಡು ರೈಲು ಹತ್ತುವುದು, ಜೋರಾದ ದ್ವನಿಯಲ್ಲಿ ಮಾತನಾಡುವ ಮೂಲಕ ಅಕ್ಕಪಕ್ಕದ ಪ್ರಯಾಣಿಕರಿಗೆ ತೊಂದರೆ ನೀಡುವುದು ಹಾಗೂ ಪಾನ್ ಹಾಕಿಕೊಂಡು ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಉಗಿಯುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ.



ಇದೀಗ ಇಂಥವುದೇ ಒಂದು ವಿಡಿಯೋವನ್ನು ನೀಲೇಶ ಶಾ ಎಂಬವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಅಹ್ಮದಾಬಾದನ ಮೊಟೆರಾ ಸ್ಟೇಡಿಯಂ ಮೆಟ್ರೋ ನಿಲ್ದಾಣದಲ್ಲಿನ ವಿಡಿಯೋ ಇದಾಗಿದೆ. ಅಕ್ಟೋಬರ 6 ರಿಂದ ಆರಂಭಗೊಂಡ ಈ ನಿಲ್ದಾಣ ಕೆಲ ಪ್ರಯಾಣಿಕರ ವರ್ತನೆಯಿಂದ ಈಗಾಗಲೇ ಅದ್ವಾನವಾಗಿದೆ.



ಪ್ರಯಾಣಿಕರು ನಿಲ್ದಾಣದಲ್ಲಿ ಮನಬಂದಂತೆ ಗುಟ್ಕಾ ಉಗಿದಿದ್ದು, ಅಲ್ಲಲ್ಲಿ ಬಾಟಲಿಗಳು ಸಹ ಬಿದ್ದಿವೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಈ ರೀತಿ ಮಾಡಿದ ಪ್ರಯಾಣಿಕರಿಗೆ ಬಾಯಿಗೆ ಬಂದಂತೆ ಉಗಿಯುತ್ತಿದ್ದಾರೆ.



https://twitter.com/NileshShah68/status/1581236629813227520?ref_src=twsrc%5Etfw%7Ctwcamp%5Etweetembed%7Ctwterm%5E1581236629813227520%7Ctwgr%5E543ef5bfc3de3cb60d33d58a4c7921ab04040f32%7Ctwcon%5Es1_c10&ref_url=https%3A%2F%2Fkannadadunia.com%2Flive-news%2Fe0b2aee0b386e0b29fe0b38de0b2b0e0b38b-e0b2b0e0b388e0b2b2e0b381-e0b2a8e0b2bfe0b2b2e0b38de0b2a6e0b2bee0b2a3e0b2a6e0b2b2e0b38de0b2b2e0b2bf%2F

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ