LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಈಜಲು ತೆರಳಿದ್ದ ಬಾಲಕರು ನೀರುಪಾಲು : ಇಬ್ಬರ ಸಾವು

news_1774685627.webp


 


ಬೆಳಗಾವಿ : ಶಾಲೆಗಳಿಗೆ ಬೇಸಿಗೆ ರಜೆ ಬಿದ್ದ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಹಿನ್ನೀರಿಗೆ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು‌ ನೀರು ಪಾಲಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹಳೇಗುಡನಟ್ಟಿ  ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. 


 
ದುರ್ಘಟನೆಯಲ್ಲಿ ಕೃಷ್ಣ ವಿಠ್ಠಲ ಖಾನಾಪುರೆ (14) ಹಾಗೂ ಪ್ರಜ್ವಲ ಗೋಕಾರ (14) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ದಾದಾಬಾನಟ್ಟಿಯ ಆರ್.ಸಿ ಸೆಂಟರ್ ಗ್ರಾಮದವರಾಗಿದ್ದಾರೆ. 
    
ಶಾಲೆಗಳಿಗೆ ಬೇಸಿಗೆಯ ರಜೆ ಇದ್ದ ಹಿನ್ನೆಲೆಯಲ್ಲಿ ಆರ್.ಸಿ ಸೆಂಟರ್ ಗ್ರಾಮದ ಐವರು ಬಾಲಕರು ಹಳೇ ಗುಡನಟ್ಟಿ ಗ್ರಾಮದ ದೇವಸ್ಥಾನ ಬಳಿಯ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ನದಿಗೆ ಇಳಿದಿದ್ದರು. ಈ ಐವರಲ್ಲಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಜಲಸಮಾಧಿಯಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ