LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಯಮುನಾ ಸ್ವಚ್ಚತೆಗೆ ಆಗ್ರಹಿಸಿ ಜಿರಳೆ ವೇಷದಲ್ಲಿ ಪ್ರತಿಭಟನೆ

ಮಥುರಾ, ಮೇ 23 : ಯಮುನಾ ನದಿಯಲ್ಲಿನ ಹೆಚ್ಚುತ್ತಿರುವ ಮಾಲಿನ್ಯ ಮತ್ತು ನಗರದ ಅಸ್ವಚ್ಛತೆಗೆ ವಿರೋಧವಾಗಿ ಸಾಮಾಜಿಕ ಕಾರ್ಯಕರ್ತನೊಬ್ಬ ಜಿರಳೆ ವೇಷ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ಮಥುರಾದಲ್ಲಿ ಗಮನ ಸೆಳೆದಿದೆ.

ಜಿರಳೆ ವೇಷ ಧರಿಸಿದ್ದ ಸಾಮಾಜಿಕ ಕಾರ್ಯಕರ್ತ ದೀಪಕ್‌ ಶರ್ಮಾ, ಹಾಡುತ್ತಾ ಮತ್ತು ನೃತ್ಯ ಮಾಡುತ್ತಾ ಪುರಸಭೆ ಕಚೇರಿಗೆ ಆಗಮಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಮುನಾ ನದಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಮಸ್ಯೆಗಳನ್ನು ತಕ್ಷಣ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಯಮುನಾದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ ಎಂದು ಅವರು ಎಚ್ಚರಿಸಿದರು.

ಯಮುನಾ ಮಾಲಿನ್ಯ ಹಾಗೂ ನಗರದಲ್ಲಿ ವ್ಯಾಪಕವಾಗಿರುವ ಕೊಳಕಿನ ಬಗ್ಗೆ ಅಧಿಕಾರಿಗಳ ಕಣ್ಣು ತೆರೆಯಿಸಲು ತಾನು ಜಿರಳೆ ವೇಷ ಧರಿಸಬೇಕಾಯಿತು ಎಂದು ದೀಪಕ್‌ ಶರ್ಮಾ ಹೇಳಿದರು.

ಮಥುರಾ ಹಾಗೂ ವೃಂದಾವನ ಪ್ರದೇಶಗಳಲ್ಲಿ ಕಲುಷಿತ ನೀರು ಮತ್ತು ಕೊಳಚೆ ನೀರು ನೇರವಾಗಿ ಯಮುನಾ ನದಿಗೆ ಸೇರುತ್ತಿದೆ. ಆದರೂ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು.

ಬ್ರಜ್‌ ಪ್ರದೇಶದ ಜನರು ಯಮುನಾ ನೀರನ್ನು ಪವಿತ್ರವೆಂದು ಪರಿಗಣಿಸಿ ಆಚಮನ ಮಾಡುತ್ತಾರೆ. ಆದರೆ ನದಿಯನ್ನು ಸ್ವಚ್ಛಗೊಳಿಸುವ ಭರವಸೆಗಳು ಕೇವಲ ಮಾತಿನಲ್ಲೇ ಉಳಿದಿವೆ ಎಂದು ಶರ್ಮಾ ಬೇಸರ ವ್ಯಕ್ತಪಡಿಸಿದರು.

ಜಿರಳೆ ವೇಷದಲ್ಲಿದ್ದ ಶರ್ಮಾರನ್ನು ನೋಡಲು ಪುರಸಭೆ ಕಚೇರಿ ಬಳಿ ಜನಸಮೂಹ ಸೇರಿತ್ತು. ಹಲವರು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಪ್ರತಿಭಟನೆಯ ದೃಶ್ಯಗಳನ್ನು ಚಿತ್ರೀಕರಿಸಿದರು.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಕಾಕ್ರೋಚ್‌ ಜನತಾ ಪಕ್ಷ ಎಂಬ ವಿಡಂಬನಾತ್ಮಕ ಅಭಿಯಾನದ ಬಳಿಕ ಈ ಪ್ರತಿಭಟನೆ ಮತ್ತಷ್ಟು ಗಮನ ಸೆಳೆದಿದೆ. ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಈ ಅಭಿಯಾನ ಆರಂಭವಾಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ನ್ಯಾಯಾಲಯದ ವಿಚಾರಣೆ ವೇಳೆ ಜಿರಳೆಗಳು ಮತ್ತು ಪರಾವಲಂಬಿಗಳ ಕುರಿತು ಮಾಡಿದ ಉಲ್ಲೇಖದ ಬಳಿಕ ಈ ರೀತಿಯ ಪ್ರತಿಭಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ