LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

8 ಲಕ್ಷ ರೂ. ಸುಪಾರಿ ಕೊಟ್ಟು ಏಕೈಕ ಪುತ್ರನನ್ನು ಕೊಲೆ ಮಾಡಿಸಿದ ತಂದೆ-ತಾಯಿ

ಹೈದರಾಬಾದ: 8 ಲಕ್ಷ ರೂಪಾರಿ ನೀಡಿ ಏಕೈಕ ಪುತ್ರನನ್ನು ದಂಪತಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕಮ್ಮಂನಲ್ಲಿ ನಡೆದಿದೆ.



26 ವರ್ಷದ ಸಾಯಿರಾಮ್ ಮೃತಪಟ್ಟ ಯುವಕ. ಸರ್ಕಾರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಕ್ಷತ್ರಿಯ ರಾಮ್ ಸಿಂಗ್ ಮತ್ತು ಅವರ ಪತ್ನಿ ರಾಣಿಬಾಯಿ ಸೇರಿ ಹಂತಕರಿಂದ ಕೊಲೆ ಮಾಡಿಸಿದ್ದಾರೆ. ಅ. 18ರಂದು ಸೂರ್ಯಪೇಟ್ ನಲ್ಲಿ ಸಾಯಿರಾಮ್ ಮೃತದೇಹ ಕಂಡು ಬಂದಿತ್ತು.



ಪೋಷಕರು ಪುತ್ರ ಕಾಣೆಯಾಗಿರುವುದಾಗಿ ನಾಟಕ ಮಾಡಿದ್ದರು. ಪುತ್ರನ ಹತ್ಯೆಗೆ ರಾಮ್ ಸಿಂಗ್ ತಮ್ಮ ಕಾರನ್ನೇ ಹಂತಕರಿಗೆ ನೀಡಿದ್ದು ಅದರಲ್ಲಿಯೇ ಶವ ಸಾಗಿಸಲಾಗಿತ್ತು. ಅ. 25 ರಂದು ಶವಾಗಾರದಲ್ಲಿದ್ದ ಪುತ್ರನ ಮೃತ ದೇಹ ನೋಡಲು ಪೊಲೀಸರು ಕರೆಕಳಿಸಿದಾಗ ದಂಪತಿ ಹತ್ಯೆಗೆ ಬಳಸಿದ್ದ ಕಾರ್ ನಲ್ಲಿಯೇ ತೆರಳಿದ್ದರು.



ಸಿಸಿಟಿವಿ ದೃಶ್ಯದಲ್ಲಿ ಕಾರ್ ಸಂಚಾರ ಗಮನಿಸಿದ ತನಿಖಾ ತಂಡ ಸಾಯಿರಾಮ್ ಪೋಷಕರನ್ನು ವಿಚಾರಣೆಗೆ ಒಳಪಡಿಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಸಾಯಿರಾಮ್ ಮದ್ಯವ್ಯಸನಿಯಾಗಿದ್ದು, ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ನಿರುದ್ಯೋಗಿಯಾಗಿದ್ದ ಆತ ಕುಡಿದುಬಂದು ರಾತ್ರಿಯಿಡಿ ಪೋಷಕರನ್ನು ಥಳಿಸುತ್ತಿದ್ದ. ವ್ಯಸನಮುಕ್ತಿ ಕೇಂದ್ರಕ್ಕೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಸಂಬಂಧಿಕರ ಎದುರು ಅವಮಾನ ಸಹಿಸಲಾಗದೆ ಪುತ್ರನ ಹತ್ಯೆಗೆ ಸಂಚುರೂಪಿಸಿದ್ದಾರೆ.



ಸಾಯಿರಾಮ್ ಸೋದರಮಾವ ಸತ್ಯನಾರಾಯಣ ನೇತೃತ್ವದಲ್ಲಿ ಮಿರ್ಯಾಲಗುಡ ಮಂಡಲದಿಂದ ಬಾಡಿಗೆ ಹಂತಕರು ಬಂದು ಹಗ್ಗದಿಂದ ಕುತ್ತಿಗೆ ಬಿಗಿದು ಸಾಯಿರಾಮ್ ಕೊಲೆ ಮಾಡಿ ಕಾರ್ ನಲ್ಲಿ ಮೃತದೇಹ ಸಾಗಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ