LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ; ಲಾಕ್ ಡೌನ್ ವಿರೋಧಿಸಿ ಬೀದಿಗಿಳಿದ ಜನ

ಬೀಜಿಂಗ, ೨೮- ಇಡೀ ವಿಶ್ವಕ್ಕೆ ಕೊರೊನಾ ಸೋಂಕನ್ನು ಹರಡಿದ ಚೀನಾದಲ್ಲಿ ಈಗ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಅಲ್ಲದೆ ಕಡ್ಡಾಯ ಪಿಸಿಆರ್ ಪರೀಕ್ಷೆ ಮಾಡಲಾಗುತ್ತಿದ್ದು, ಇದೆಲ್ಲದರ ವಿರುದ್ಧ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.



ಭಾನುವಾರ ಒಂದೇ ದಿನ 40,000ಕ್ಕೂ ಅಧಿಕ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ಸೋಂಕು ವ್ಯಾಪಕವಾಗಿರುವ ಪ್ರದೇಶಗಳಲ್ಲಿ ಜನ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ.



ಹೀಗಾಗಿ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದು, ಇದರಿಂದಾಗಿ ಸೋಂಕು ಮತ್ತಷ್ಟು ಹೆಚ್ಚಳವಾಗುವ ಆತಂಕ ಎದುರಾಗಿದೆ. ಕೆಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚೀನಾದಲ್ಲಿ ಈಗ ಕಾಣಿಸಿಕೊಂಡಿರುವ ಸೋಂಕು ಲಕ್ಷಣರಹಿತ ಪ್ರಕರಣಗಳಾಗಿದ್ದು, ಒಂದೊಮ್ಮೆ ಕೊರೊನಾದ ಹೊಸ ರೂಪಾಂತರ ವರದಿಯಾದಲ್ಲಿ ಚೀನಾದಿಂದ ಜಗತ್ತಿಗೆ ಮತ್ತೊಮ್ಮೆ ಕಂಟಕ ಬರುವ ಸಾಧ್ಯತೆ ಇದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ