LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಜನಪ್ರಿಯ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ನಿಧನ

ಧಾರವಾಡ : ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ



ಹಾಸ್ಯ ನಟ, ರಂಗಭೂಮಿ ಕಲಾವಿದ, ರಂಗಕರ್ಮಿ ರಾಜು ತಾಳಿಕೋಟಿ (62) ಸೋಮವಾರ ಮಣಿಪಾಲ್‌ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ ತಿಳಿಸಿದ್ದಾರೆ.



ಚಲನಚಿತ್ರದ ಚಿತ್ರೀಕರಣಕ್ಕಾಗಿ ಮಂಗಳೂರಿನಲ್ಲಿದ್ದ ರಾಜು ತಾಳಿಕೋಟಿ ಅವರಿಗೆ ಭಾನುವಾರ ರಾತ್ರಿ ತೀವ್ರ ಹೃಯಾಘಾತ ಆಗಿತ್ತು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಆಸ್ತತ್ರೆಯಲ್ಲಿ ನಿಧನರಾದರು.



ಪ್ರಸ್ತುತ ಧಾರವಾಡ ರಂಗಾಯಣ ನಿರ್ದೇಶಕರಾಗಿ ಸೇವೆಯಲ್ಲಿದ್ದ ಅವರು, ಸಿನೆಮಾವೊಂದರ ಚಿತ್ರೀಕರಣಕ್ಕಾಗಿ ಕಳೆದ ವಾರ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದರು. ಹೆಬ್ರಿ ಬಳಿ ಶೂಟಿಂಗ್ ವೇಳೆ ಹೃದಯಾಘಾತದಿಂದ ಅಸುನೀಗಿದ್ದಾರೆ.



ಮಂಗಳವಾರ ಅವರ ಊರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಅವರ ಪುತ್ರ ಭರತ ತಾಳಿಕೋಟಿ ಅವರು ತಿಳಿಸಿದ್ದಾರೆ.



ಕಲಿಯುಗದ ಕುಡುಕ ಸೇರಿದಂತೆ ಅನೇಕ ಉತ್ತರ ಕರ್ನಾಟಕದ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು. ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು.

ರಾಜು ತಾಳಿಕೋಟಿ ಅವರು ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟಿಯವರಾಗಿದ್ದರು. ಇತ್ತೀಚೆಗೆ ರಂಗಾಯಣ ಧಾರವಾಡದ ನಿರ್ದೇಶಕರಾಗಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ