ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ ಮುತಾಲಿಕ

ಬೆಂಗಳೂರು, ೧೯- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದ್ದರು. ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.

ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ ಮುತಾಲಿಕ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೇ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು.

ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಮೋದ ಮುತಾಲಿಕ ಹೇಳಿದ್ದು, ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ ಕುಮಾರ ಅವರಿಗೆ ಸ್ಪರ್ಧೆ ನೀಡಲಿದ್ದಾರೆ. ಅಲ್ಲದೇ ಶ್ರೀರಾಮ ಸೇನೆ ವತಿಯಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸಹ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.