LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

12 ವರ್ಷಗಳ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ, ಜೂ. 8 : ಕಳೆದ 12 ವರ್ಷಗಳಲ್ಲಿ ಭಾರತವು ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದ್ದು, ಈ ಬದಲಾವಣೆಗಳ ಕೇಂದ್ರಬಿಂದುವಾಗಿ ಬಡವರ ಕಲ್ಯಾಣ ಕಾರ್ಯನಿರ್ವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಕಲ್ಯಾಣ ಯೋಜನೆಗಳ ಪರಿಣಾಮ ದೇಶದ ಕೋಟ್ಯಂತರ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ನೇರ ನಗದು ವರ್ಗಾವಣೆ, ಸ್ವಚ್ಛ ಭಾರತ ಅಭಿಯಾನ, ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಆಯುಷ್ಮಾನ ಭಾರತ ಸೇರಿದಂತೆ ಹಲವು ಯೋಜನೆಗಳು ಸಾಮಾನ್ಯ ಜನರಿಗೆ ಗೌರವಯುತ ಜೀವನ ಹಾಗೂ ಸಮಾನ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೊಂಡಿವೆ ಎಂದು ಅವರು ಹೇಳಿದ್ದಾರೆ.

ಕಳೆದ 12 ವರ್ಷಗಳ ಅಭಿವೃದ್ಧಿಯ ಪಯಣಕ್ಕೆ ಬಡವರು, ರೈತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣವೇ ಮೂಲ ಪ್ರೇರಣೆಯಾಗಿದೆ. ಅಂತ್ಯೋದಯ ತತ್ವದ ಆಧಾರದ ಮೇಲೆ ಅಭಿವೃದ್ಧಿಯ ಫಲಗಳು ಸಮಾಜದ ಕೊನೆಯ ವ್ಯಕ್ತಿಗೂ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸಿದೆ ಎಂದು ಮೋದಿ ತಿಳಿಸಿದ್ದಾರೆ.

‘ಬಡವರ ಕಲ್ಯಾಣದ 12 ವರ್ಷಗಳು’ ಎಂಬ ಅಭಿಯಾನದ ಅಂಗವಾಗಿ ಮಾಡಿದ ಸಂದೇಶದಲ್ಲಿ, ಬಡವರ ಜೀವನಮಟ್ಟ ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರವನ್ನು ಅವರು ವಿಶೇಷವಾಗಿ ಉಲ್ಲೇಖಿಸಿದ್ದಾರೆ. ನೇರ ನಗದು ವರ್ಗಾವಣೆ ಹಾಗೂ ಅಂಕೀಯ ವ್ಯವಸ್ಥೆಗಳ ಮೂಲಕ ಸರ್ಕಾರದ ನೆರವು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಸೋರಿಕೆ ತಡೆಯಲ್ಪಟ್ಟಿದ್ದು, ಆಡಳಿತದ ಪಾರದರ್ಶಕತೆ ಮತ್ತು ದಕ್ಷತೆ ಹೆಚ್ಚಾಗಿದೆ. ಅಲ್ಲದೆ, ಸರ್ಕಾರದ ಮೇಲಿನ ಸಾರ್ವಜನಿಕರ ವಿಶ್ವಾಸವೂ ಬಲಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬಡವರ ಕಲ್ಯಾಣದ ಈ ಪಯಣವು ಈಗ ಮಾನವ ಸಬಲೀಕರಣ ಮತ್ತು ವಿಕಸಿತ ಭಾರತದ ನಿರ್ಮಾಣದತ್ತ ಸಾಗುತ್ತಿರುವ ಸಾಮೂಹಿಕ ಚಳವಳಿಯಾಗಿ ರೂಪುಗೊಂಡಿದೆ ಎಂದು ಮೋದಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ