LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಪರೀಕ್ಷೆ ಇಲ್ಲದೇ ಬಡ್ತಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ನಿರ್ಧರಿಸಿದೆ. ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಹೆಚ್ಚಳ ಮಾಡಲಾಗಿದೆ.



ಮುಂದಿನ ಬಾರಿ ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿ ವೇಳೆ ಶೇಕಡ 60 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದು, ಶೇಕಡ 40ರಷ್ಟು ಹುದ್ದೆಗಳಿಗೆ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲಾಗುವುದು. ಶಿಕ್ಷಣ ಇಲಾಖೆಯ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ನೀಡಲಾಗಿದೆ.



ಈ ಮೂಲಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ರಾಜ್ಯದಲ್ಲಿ 1.53 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಇವರಲ್ಲಿ 85,000 ಶಿಕ್ಷಕರು ಪದವೀಧರ ಶಿಕ್ಷಕರಾಗಿದ್ದಾರೆ. ನೇಮಕಾತಿ ಸಂದರ್ಭದಲ್ಲಿ ಬಡ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ಇಲ್ಲದೆ ಬಡ್ತಿಗೆ ಅವಕಾಶ ನೀಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ