LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ನಿಷೇಧ ಆದೇಶ ಧಿಕ್ಕರಿಸಿ ಪ್ರತಿಭಟನೆ: ಎಂಇಎಸ್ ಕಾರ್ಯಕರ್ತರು ವಶಕ್ಕೆ

ಬೆಳಗಾವಿ: ಅಧಿವೇಶನದ ವಿರೋಧವಾಗಿ ಮಹಾಮೇಳ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸ ವಶಕ್ಕೆ ಪಡೆದಿದ್ದಾರೆ.



ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಾಡದ್ರೋಹಿ ಎಂಇಎಸ್ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳ ಆಯೋಜನೆ ಮಾಡುತ್ತಿದ್ದು ಈ ಬಾರಿಯು ಎಂಇಎಸ್ ಮಹಾಮೇಳ ಆಯೋಜನೆ ಮಾಡಿದೆ. ಹಾಗಾಗಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧ ಹೇರಿತ್ತು. ಆದರೆ ಜಿಲ್ಲಾಡಳಿತ ನಿಷೇಧ ಧಿಕ್ಕರಿಸಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿ ಮಹಾಮೇಳ ಆಚರಣೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.‌



ಎಂಇಎಸ್ ನಾಯಕರಾದ ಮನೋಹರ ಕಿಣೇಕರ, ಆರ್ ಎಂ. ಪಾಟೀಲ, ಪ್ರಕಾಶ ಶಿರೋಳಕರ, ಪ್ರಕಾಶ ಮರ್ಕಾಳೆ ಸೇರಿ  ನಗರದ ಸಂಭಾಜಿ ವೃತ್ತದ ಬಳಿ 20ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆಯಲಾಗಿದೆ.‌ ಎಂಇಎಸ್ ಮಹಾಮೇಳದ ಹಿನ್ನೆಲೆ ಬೆಳಗಾವಿ‌ ನಗರದಲ್ಲಿ ಬಿಗಿ ಖಾಕಿ ಸರ್ಪಗಾವಲು ಹಾಕಲಾಗಿತ್ತು. ನಗರದ ಮೂರು ಮೈದಾನ, ಒಂದು ವೃತ್ತದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ ಬೀಗಿ ಭದ್ರತೆ ಒದಗಿಸಲಾಗಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ