LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.



15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದಾರೆ. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿವೆ.



ಈ ಕುರಿತಂತೆ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-03-2022ರಂದು ಅಧಿಸೂಚನೆ ಹೊರಡಿಸಲಾಗಿತ್ತು.



ಆನ್ ಲೈನ್ ಮೂಲಕ ದಿನಾಂಕ 21-03-2022 ರಿಂದ 22-04-2022ರವರೆಗೆ ಅವಕಾಶ ನೀಡಲಾಗಿತ್ತು ಎಂದು ಹೇಳಿದೆ.



ಇನ್ನೂ 15,000 ಶಾಲಾ ಶಿಕ್ಷಕರ ಹುದ್ದೆಗಳಿಗಾಗಿ ಒಟ್ಟು 1,16,223 ಮಂದಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21-05-2022 ಹಾಗೂ 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ 68,849 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 51,098 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದರು ಎಂದು ತಿಳಿಸಿದೆ.



1:2 ಅನುಪಾತದಂತೆ 22,432 ಅಭ್ಯರ್ಥಿಗಳ ದಾಖಲಾತಿಯನ್ನು ಪರಿಶೀಲನೆ ನಡೆಸಲಾಯಿತು. ಇಂದು 1:1 ಅನುಪಾತದಂತೆ ಆಯ್ಕೆಯಾಗಿರುವಂತ 13,363 ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.



ಈ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಆಯಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ 19-11-2022 ರಿಂದ 23-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ. ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ