LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯೋತ್ಸವ ದಿನ ಸಮದರ್ಶಿ ಸಂಪಾದಕ ಎ.ಬಿ.ಧಾರವಾಡಕರ ಸೇರಿ ಬೆಳಗಾವಿ ಜಿಲ್ಲೆಯ ಹಲವು ಪತ್ರಕರ್ತರಿಗೆ ಸನ್ಮಾನ

ಬೆಳಗಾವಿ ಅ. 30 : ಬೆಳಗಾವಿ ಜಿಲ್ಲಾ ಮಾಧ್ಯಮ ವಿಭಾಗದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು ಸಮದರ್ಶಿ ದಿನಪತ್ರಿಕೆಯ ಸಂಪಾದಕ ಎ.ಬಿ.ಧಾರವಾಡಕರ ಸೇರಿದಂತೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿವಿಧ ವಿಭಾಗಗಗಳ 11 ಜನ ಪತ್ರಕರ್ತರಿಗೆ ಕರ್ನಾಟಕ ರಾಜ್ಯೋತ್ಸವ-2024ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನವೆಂಬರ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಕನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.



ಸನ್ಮಾನಗೊಳ್ಳುವವರ ವಿವರ:



ಜಿಲ್ಲಾ/ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರುಗಳ ವಿಭಾಗ:

ಸಮದರ್ಶಿ ದಿನಪತ್ರಿಕೆಯ ಸಂಪಾದಕರಾದ ಅಶ್ರಫ ಬಾಬಾಸಾಬ ಧಾರವಾಡಕರ



ಮುದ್ರಣ ಮಾಧ್ಯಮ ವಿಭಾಗ: ಪಿ.ಟಿ.ಐ. ಸುದ್ದಿ ಸಂಸ್ಥೆ ವರದಿಗಾರರಾದ ಸುಭಾಷ ಮದ್ಧುರಾವ ಕುಲಕರ್ಣಿ ಹಾಗೂ ಉದಯವಾಣಿ ದಿನಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರರಾದ ಭೈರೋಬಾ ಶಿವಾಜಿ ಕಾಂಬಳೆ



ಪತ್ರಿಕಾ ಛಾಯಾಗ್ರಾಹಕರ ವಿಭಾಗ: ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆ ಛಾಯಾಗ್ರಾಹಕರಾದ ಏಕನಾಥ ರಾಮಚಂದ್ರ ಅಗಸಿಮನಿ.

ವಿದ್ಯುನ್ಮಾನ ಮಾಧ್ಯಮ ವಿಭಾಗ: ಪ್ರಜಾ ಟಿ.ವಿ. ಜಿಲ್ಲಾ ವರದಿಗಾರರಾದ ಚಂದ್ರು ಹಣಮಂತ ಶ್ರೀರಾಮುಡು ಮತ್ತು ಚಿಕ್ಕೋಡಿ ಸುವರ್ಣ ನ್ಯೂಸ್ ವರದಿಗಾರರಾದ ಮುಸ್ತಾಕ ಅಹ್ಮದ ಸಯ್ಯದ ಹುಸೇನ್ ಪೀರಜಾದೆ.



ಟಿವಿ ಕ್ಯಾಮರಾಮೆನ್ ವಿಭಾಗ: ನ್ಯೂಸ್ ಫರ್ಸ್ಟ ಕ್ಯಾಮೆರಾಮನ್ ರೋಹಿತ ನಾರಾಯಣ ಶಿಂಧೆ ಮತ್ತು ಇನ್ ನ್ಯೂಸ್ ಛಾಯಾಗ್ರಾಹಕ ಸುಭಾನಿ ಇಮಾಮಸಾಬ ಮುಲ್ಲಾ.



ತಾಲೂಕು ವರದಿಗಾರರ ವಿಭಾಗ: ಚನ್ನಮ್ಮನ ಕಿತ್ತೂರಿನ ಪ್ರಜಾವಾಣಿ ದಿನಪತ್ರಿಕೆಯ ತಾಲೂಕು ವರದಿಗಾರರಾದ ಪ್ರದೀಪ ನೀಲಕಂಧರ ಮೇಲಿನಮನಿ ಮತ್ತು ಕಾಗವಾಡ ತಾಲೂಕಿನ ಸಂಯುಕ್ತ ಕರ್ನಾಟಕ ಹಾಗೂ ಕನ್ನಡಪ್ರಭ ದಿನಪತ್ರಿಕೆಯ ತಾಲೂಕು ವರದಿಗಾರರಾದ ಸಿದ್ಧಯ್ಯ ಗಂಗಯ್ಯ ಹಿರೇಮಠ.



ಪತ್ರಿಕಾ ವಿತರಕರ ವಿಭಾಗ: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಸದೆಪ್ಪ ಫಕೀರಪ್ಪ ಗರಗದ



ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಕರ್ನಾಟಕ ರಾಜ್ಯೋತ್ಸವ-2024ರ ಮಾಧ್ಯಮ ಪ್ರತಿನಿಧಿಗಳ ಸನ್ಮಾನ ಆಯ್ಕೆ ಸಮಿತಿ ಸಭೆಯಲ್ಲಿ ಈ 11 ಜನ ಪತ್ರಕರ್ತರನ್ನು ಸನ್ಮಾನಿಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.







Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡೊಲ್ಲ: ರಾಜನಾಥ ಸಿಂಗ್ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಠ್; ಜು.1ರಿಂದ ಅಧಿಕಾರ ಸ್ವೀಕಾರಪರಾರಿ ನೀರವ ಮೋದಿ ಪ್ರಕರಣಕ್ಕೆ ತಿರುವು: ಭ್ರಷ್ಟಾಚಾರದ ಸಾಕ್ಷ್ಯ ಇಲ್ಲ ಎಂದ ಸಿಬಿಐನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವಭಾರತೀಯ ನಾವಿಕರ ಹತ್ಯೆಯ ಕಾವಿನ ನಡುವೆ ಫ್ರಾನ್ಸ, ಸ್ಲೋವೇಕಿಯಾ ದೇಶಗಳ ೧ ವಾರದ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿರೈತರ ಜಮೀನು ಕಬಳಿಸುವ ಯತ್ನ: ಆರ್‌.ಅಶೋಕ ಆರೋಪ4 ಗೋಲುಗಳ ದಾಳಿಯಿಂದ ಅಮೆರಿಕದ ಶುಭಾರಂಭಮಣಿಪುರದಲ್ಲಿ ದಿಗ್ಬಂಧನ: ಪೆಟ್ರೋಲ್ ₹230, ಅಡುಗೆ ಅನಿಲ ₹5,000ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆ