ಗೋಕಾಕ, ಜೂನ್ 18: ದಿ ಗೋಕಾಕ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಮಾರ್ಕೆಟ್ ಯಾರ್ಡ್ ಶಾಖೆಯ ಶಾಖಾ ವ್ಯವಸ್ಥಾಪಕರಾಗಿದ್ದ ರಮೇಶ ಮುರಿಗೆಪ್ಪ ಕಲ್ಯಾಣಶೆಟ್ಟಿ ಅವರು ಗುರುವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ಸೇವೆ ಮತ್ತು ಸೌಜನ್ಯಯುತ ನಡೆ-ನುಡಿಗಳ ಮೂಲಕ ಗುರುತಿಸಿಕೊಂಡಿದ್ದ ಅವರು ಅಕಾಲಿಕವಾಗಿ ನಿಧನರಾಗಿರುವುದು ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತ ವಲಯದಲ್ಲಿ ದುಃಖದ ವಾತಾವರಣ ಮೂಡಿಸಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅವರ ಅಂತ್ಯಯಾತ್ರೆಯು ಗುರುವಾರ ಸಂಜೆ 6 ಗಂಟೆಗೆ ಸೋಮವಾರಪೇಟೆಯಲ್ಲಿರುವ ಅವರ ನಿವಾಸದಿಂದ ಹೊರಡಲಿದ್ದು, ಜ್ಞಾನ ಮಂದಿರದ ಎದುರಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಮೇಶ ಕಲ್ಯಾಣಶೆಟ್ಟಿ ಅವರ ನಿಧನಕ್ಕೆ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಸಂತಾಪ ವ್ಯಕ್ತಪಡಿಸಿದ್ದಾರೆ.