ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮರಕ್ಕೂ ಸಿದ್ಧ ಸಂಧಾನಕ್ಕೂ ಸಿದ್ಧ : ಮುರುಘಾ ಶರಣರು 

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ .

ಇತ್ತ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ. ಇದರ ನಡುವೆ ಮುರುಘಾ ಶ್ರೀಗಳ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಚಿತ್ರದುರ್ಗದ ಮುರುಘಾ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ ಅವರು, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಸಲಹಾ ಸಮಿತಿ ಸಭೆಯಲ್ಲಿ ಭಕ್ತರು, ವಕೀಲರು, ವಿವಿಧ ಸಮಾಜಗಳ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು. ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಮುಖಂಡರು, ನೇರವಾಗಿ ಮಾಜಿ ಶಾಸಕ ಬಸವರಾಜನ್ ಅವರ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದಾರೆ.

ಆದರೆ ಮುರುಘಾಶ್ರೀ ಅವರು ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ತಪ್ಪು ಒಪ್ಪಿಕೊಂಡು ಬಂದರೆ ಕ್ಷಮಿಸಿ ಸಂಧಾನ ಮಾಡೋಣ. ಕಾನೂನು ಸಮರಕ್ಕೆ ಸೈ ಅಂದ್ರೆ ಕಾನೂನು ಮೂಲಕವೇ ಹೋರಾಟ ಮಾಡೋಣ ಎಂದು ಆಪ್ತರೆದುರು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.