ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೀಘ್ರವೇ 5 ಸಾವಿರ ಕಾನ್ಸ​ಟೇಬಲ್​ಗಳ ನೇಮಕ

ಬೆಂಗಳೂರು: ಶೀಘ್ರವೇ ಐದು ಸಾವಿರ ಕಾನ್ಸಟೇಬಲ್​ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಪೊಲೀಸ್​ ಕಾನ್ಸ್‌ಟೇಬಲ್​​ಗಳ ನೇಮಕಾತಿ ವಿಳಂಬ ಬಗ್ಗೆ ಬಿಜೆಪಿ ಶಾಸಕ ಪ್ರೀತಮ ಗೌಡ ಪ್ರಶ್ನೆ ಮಾಡಿದ್ರು. ಈ ಪ್ರಶ್ನೆಗೆ ಉತ್ತರಿಸಿದ ಆರಗ ಜ್ಞಾನೇಂದ್ರ, 9,432 ಪೊಲೀಸ್ ಕಾನ್ಸ​ಟೇಬಲ್​ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸಟೇಬಲ್ ಗಳ​​ ನೇಮಕಕ್ಕೆ ನೋಟಿಫಿಕೇಷನ್ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್​ಟೇಬಲ್​ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.

ಕೋವಿಡ್ ವೇಳೆ ಪೊಲೀಸ್​ ನೇಮಕಾತಿ ಆಗಿಲ್ಲ ಅನ್ನೋದು ತಪ್ಪು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು.. ಆಗ

ಕೋವಿಡ್ ಕಾರಣದಿಂದ ಕಾನ್ಸ್​ಟೇಬಲ್​ ನೇಮಕಾತಿ ವಿಳಂಬ ಆಗಿದೆ. ಹೀಗಾಗಿ ಕಾನ್ಸ್​ಟೇಬಲ್​​ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಆರಗ ಜ್ಞಾನೇಂದ್ರ, ಸಾಮಾನ್ಯ ವರ್ಗಕ್ಕೆ 18ರಿಂದ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ವಯೋಮಿತಿ ಸಡಿಲಿಸಲು ನನಗೂ ಕೂಡ ಫೋನ್ ಬರುತ್ತಿವೆ. ಆದರೆ ಕೋವಿಡ್ ವೇಳೆ ನೇಮಕಾತಿ ಆಗಿಲ್ಲ ಎಂಬುದು ತಪ್ಪು. ಕೋವಿಡ್ ಅವಧಿಯಲ್ಲಿ ಪೊಲೀಸ್ ನೇಮಕಾತಿ ನಿಂತಿರಲಿಲ್ಲ. ವಯೋಮಿತಿ ಹೆಚ್ಚಳ ಮಾಡುವ ಯೋಚನೆ ಸದ್ಯಕ್ಕಿಲ್ಲ ಎಂದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.