LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರದಿಂದ 6 ಟಿಎಂಸಿ ನೀರು ಬಿಡುಗಡೆಗೆ ರಾಜ್ಯ ಸರ್ಕಾರದ ಮನವಿ

ಬೆಳಗಾವಿ, ಎ.15 : ಬೆಳಗಾವಿ, ವಿಜಯಪುರ, ಬಾಗಲಕೋಟ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ‌ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದೆ.



ಈ ಕುರಿತು ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್ ಅವರು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಎಪ್ರಿಲ್ 15 ರಂದು ಪತ್ರವನ್ನು ಬರೆದಿದ್ದಾರೆ.



ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ರಾಜ್ಯದ ಹಿಪ್ಪರಗಿ ಬ್ಯಾರೇಜಿನಲ್ಲಿ ನೀರಿನ ಸಂಗ್ರಹ ಕಡಿಮೆ ಇರುತ್ತದೆ.



ಆದ್ದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ತಪ್ಪಿಸಲು ಮಹಾರಾಷ್ಟ್ರ ರಾಜ್ಯದ ಕೊಯ್ನಾ ಜಲಾಶಯಗಳಿಂದ 3 ಟಿ‌ಎಂಸಿ ಹೆಚ್ಚುವರಿ ನೀರು ಕೃಷ್ಣಾ ನದಿಗೆ ಬಿಡುಗಡೆಗೊಳಿಸಬೇಕು. ಅದೇ ರೀತಿ ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಬಿಡುಗಡೆ ಮಾಡಬೇಕು.

ಹೀಗೆ ಮೇ ಮತ್ತು ಜೂನ್ ತಿಂಗಳಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಮಾನವೀಯತೆ ದೃಷ್ಟಿಯಿಂದ ಒಟ್ಟು ಆರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಕೇಶ್ ಸಿಂಗ್ ಪತ್ರದಲ್ಲಿ ವಿನಂತಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ