LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆರ್ ಟಿ ಓ ಅಧಿಕಾರಿಗೆ 4 ವರ್ಷ ಶಿಕ್ಷೆ, 63 ಲಕ್ಷ ರೂ. ದಂಡ

ಬೆಳಗಾವಿ : ಭ್ರಷ್ಟಾಚಾರದ ಮೂಲಕ 63 ಲಕ್ಷ ರೂಪಾಯಿ ಹಣ ಸಂಪಾದಿಸಿದ್ದ ಬೀದರ್ ಸಾರಿಗೆ ವಿಭಾಗದ ಅಧಿಕಾರಿಗೆ ಬೆಳಗಾವಿಯ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 63 ಲಕ್ಷ ದಂಡ ವಿಧಿಸಿದೆ.



ಬೆಳಗಾವಿಯ 4ನೇ ಅಧಿಕ ಸತ್ರ ವಿಶೇಷ ನ್ಯಾಯಾಲಯದ ನ್ಯಾಯಧೀಶ ನಾರಾಯಣ ಪ್ರಭು ಬೀದರ್ ಜಿಲ್ಲೆಯ ಹುಮನಾಬಾದದ ಸಾರಿಗೆ ಇಲಾಖೆಯ ಸಹಾಯಕ ಸಾರಿಗೆ ಅಧಿಕಾರಿಯಾಗಿದ್ದ ಪಿ ಶಾಂತಕುಮಾರ ಮುನಿಸ್ವಾಮಿ ಎಂಬುವರಿಗೆ ಶಿಕ್ಷೆ ವಿಧಿಸಿದ್ದಾರೆ.



ಶಾಂತಕುಮಾರ ತಮ್ಮ ಆದಾಯಕ್ಕಿಂತ ಹೆಚ್ಚು ಹಣವನ್ನು ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಸಂಪಾದಿಸಿರುವದನ್ನು ಗುಪ್ತ ಮಾಹಿತಿ ಮೂಲಕ ಕಲೆಹಾಕಿದ್ದ ಬೆಳಗಾವಿಯ ಲೋಕಾಯುಕ್ತ ವಿಭಾಗ 03-05-2010ರಂದು ಅವರ ಬೀದರನ ಮನೆ ಮತ್ತು ಕಛೇರಿ ಮತ್ತು ಬೆಳಗಾವಿಯ ಆಂಜನೇಯ ನಗರದ ಮನೆಯ ಮೇಲೆ ದಾಳಿ ಮಾಡಿ ಅವರು 1 ಕೋಟಿ 14 ಲಕ್ಷ 62 ಸಾವಿರದ 121 ರೂಪಾಯಿ ಗಳಿಸಿರುವದು ಪತ್ತೆ ಹಚ್ಚಿ ಇದರಲ್ಲಿ 63 ಲಕ್ಷ ಭ್ರಷ್ಟಾಚಾರದಿಂದ ಹೊಂದಿರುವುದು ತನಿಖೆಯಿಂದ ತಿಳಿದು ಬಂದಿತ್ತು.



ಈ ಬಗ್ಗೆ ಬೆಳಗಾವಿಯ ನ್ಯಾಯಾಲಯದಲ್ಲಿ ದೋಷರೋಪ ಪಟ್ಟಿ ಸಲ್ಲಿಸಿತ್ತು. ಬೆಳಗಾವಿಯ ಲೋಕಾಯುಕ್ತ ಪೊಲೀಸ್ ಇನ್ಸಪೆಕ್ಟರ್ ಗಳಾದ ಆರ್ ಕೆ ಪಾಟೀಲ ಮತ್ತು ನಂತರ ಆರ್ ಬಿ ಹವಾಲ್ದಾರ ತನಿಖೆ ಕೈಗೊಂಡಿದ್ದರು.



ಶಿಕ್ಷೆ ಮತ್ತು ದಂಡಕ್ಕೊಳಗಾಗಿರುವ ಶಾಂತಕುಮಾರ ದಂಡ ಕಟ್ಟಲು ವಿಫಲವಾದರೆ ಅವರ ಮತ್ತು ಅವರ ಪತ್ನಿಯ ಹೆಸರಿನಲ್ಲಿರುವ ಚರ ಮತ್ತು ಸ್ಥಿರಾಸ್ತಿ ಮಾರಾಟ ಮಾಡಿ ಹಣ ಹೊಂದಿಸಲು ನ್ಯಾಯಾಲಯ ಆದೇಶಿಸಿದೆ.



ಸರಕಾರದ ಪರವಾಗಿ ಪ್ರವೀಣ ಅಗಸಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು ಎಂದು ಬೆಳಗಾವಿ ಲೋಕಾಯುಕ್ತ ಪೊಲೀಸ್ ಕಮಿಷನರ್ ಯಶೋದಾ ವಂಟಿಗುಡಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ