LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತು

ಬೆಳಗಾವಿ, ಸೆ 3 : (ಸಮದರ್ಶಿ ಸುದ್ದಿ) - ಹಿಂಡಲಗಾ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯೊಂದಿಗೆ ಅಕ್ರಮ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಜಯಶ್ರೀ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಂತರಿಕ ಭದ್ರತಾ ವಿಭಾಗದ ಐಜಿಪಿ ಕೆ. ತ್ಯಾಗರಾಜನ್‌ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

news_1788433222_0_572.webp

 

ತುಮಕೂರಿನ ಕುಣಿಗಲ್‌ ಮೂಲದ ಸಾಯಿಕುಮಾರ್‌ ಅಲಿಯಾಸ್‌ ಸುರೇಶ್‌ ಎಂಬಾತ ಹಿಂಡಲಗಾ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಹಾಗೂ ರೌಡಿಶೀಟರ್‌ ಎಂದು ತಿಳಿದುಬಂದಿದೆ. ಆತನೊಂದಿಗೆ ಜಯಶ್ರೀ ಅವರು ವೀಡಿಯೊ ಕರೆ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಜೈಲಿನಲ್ಲಿದ್ದ ಕೈದಿಗೆ ಮೊಬೈಲ್‌ ಒದಗಿಸಿ, ಆತನೊಂದಿಗೆ ವೀಡಿಯೊ ಕರೆ ಮೂಲಕ ಅಶ್ಲೀಲವಾಗಿ ವರ್ತಿಸಿರುವ ದೃಶ್ಯಗಳು ಹಾಗೂ ಧ್ವನಿ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಇದರಿಂದ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಕೈದಿಯ ಬ್ಯಾಂಕ್‌ ಖಾತೆ ಹಾಗೂ ಆತನ ತಾಯಿಯ ಮೂಲಕ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಮತ್ತು ಕೈದಿಗೆ ಸೇರಿದ ಸ್ಕೂಟರ್‌ ಹಾಗೂ ಸ್ವಿಫ್ಟ್‌ ಕಾರನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿರುವುದಕ್ಕೆ ಸಂಬಂಧಿಸಿದ ಸಂಭಾಷಣೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ವೀಡಿಯೊಗಳು ವೈರಲ್‌ ಆದ ಬೆನ್ನಲ್ಲೇ, ಕೈದಿ ಸಾಯಿಕುಮಾರ್‌ನನ್ನು ಎನ್‌ಕೌಂಟರ್‌ ಮಾಡಿಸುವ ಕುರಿತು ಜಯಶ್ರೀ ಅವರು ನಡೆಸಿದ್ದಾರೆ ಎನ್ನಲಾದ ಧ್ವನಿ ಸಂಭಾಷಣೆಯೂ ಬಹಿರಂಗಗೊಂಡಿತ್ತು.

ಕರ್ತವ್ಯ ಲೋಪ, ಅಶಿಸ್ತು ಆರೋಪ

ಪ್ರಕರಣದ ಕುರಿತು ಇಲಾಖೆಯಿಂದ ಆಂತರಿಕ ತನಿಖೆ ನಡೆಸಲಾಗಿದೆ. ಮೇಲ್ನೋಟಕ್ಕೆ ಕರ್ತವ್ಯ ಲೋಪ, ಅಶಿಸ್ತು ಹಾಗೂ ಅಧಿಕಾರ ದುರುಪಯೋಗದ ಆರೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಜಯಶ್ರೀ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖಾ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ