LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸುಳ್ಳಿನ ವಿಶ್ವವಿದ್ಯಾಲಯದ ಕುಲಪತಿ ಸೂಲಿಬೆಲೆಯೊಂದಿಗೆ ಚರ್ಚೆಯ ಅವಶ್ಯಕತೆ ಇಲ್ಲ : ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದು ಪದದ ಕುರಿತು ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಚಕ್ರವರ್ತಿ ಸೂಲಿಬೆಲೆ ಬೆಳಗಾವಿಯ ಯಮಕನಮರಡಿಯಲ್ಲಿ ಬಹಿರಂಗ ಸವಾಲು ಹಾಕಿದ್ದರು. ಈಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಓಪನ್ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ ನಾವು ಸೂಲಿಬೆಲೆಯ 10 ವರ್ಷಗಳ ಹೇಳಿಕೆಗಳ ಪರಶೀಲನೆ ಮಾಡುತ್ತಿದ್ದೇವೆ. ಅವರು ಹೇಳಿದ್ದು ಇದುವರೆಗೆ ಏನಾದರೂ ನಿಜ ಆಗಿದೆಯಾ ಎನ್ನುವುದನ್ನು ನೋಡುತ್ತಿದ್ದೇವೆ. ಸೂಲಿಬೆಲೆ ಹೇಳಿದ್ದ ಚಿನ್ನದ ರಸ್ತೆ ಎಲ್ಲಿದೆ ಎಂದು ಹುಡುಕುತ್ತಿದ್ದೇವೆ ಎಂದಿದ್ದಾರೆ.



ಬೆಳಿಗ್ಗೆ ಬೆಂಗಳೂರಿಂದ ಮಂಗಳೂರಿಗೆ ಹೋಗಿ ಸಂಜೆ ಮತ್ತೆ ಬೆಂಗಳೂರು ಊಟಕ್ಕೆ ಬರಬೇಕು. ಅಂಥ ರಸ್ತೆ ಇದೆ ಅನ್ನುತ್ತಾರೆ. ಆ ರಸ್ತೆ ಎಲ್ಲಿದೆ ಹುಡುಕುತ್ತಿದ್ದೇವೆ, ಸೂಲಿಬೆಲೆ ಸುಳ್ಳು ವಿಶ್ವವಿದ್ಯಾಲಯದ ಕುಲಪತಿ ಎಂದು ಕಾಲೆಳೆದಿದ್ದಾರೆ.



ಅವನು ಹೇಳಿದ್ದರಲ್ಲಿ ಒಂದಾದರೂ ಸತ್ಯವಾಗಿದ್ದರೆ ನಾವು ಅವರ ಜೊತೆ ಚರ್ಚೆ ಮಾಡುತ್ತೇವೆ. ಇಂತಹ ವ್ಯಕ್ತಿಯ ಜೊತೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎನ್ನುವುದು ನನ್ನ ಕಾರ್ಯಕರ್ತರ ಹಾಗೂ ನನ್ನ ಅಭಿಪ್ರಾಯವಾಗಿದೆ ಎಂದು ಸತೀಶ ಹೇಳಿದ್ದಾರೆ.



ಅದರಂತೆ ಶಾಸಕ ಯತ್ನಾಳ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ಬೇಕಾದರೆ ಒಂದು ಪ್ರತ್ಯೇಕ ವೇದಿಕೆ ಕರೆದು ಮಾತನಾಡುತ್ತೇನೆ ಎಂದಿದ್ದಾರೆ. ಗೋಕಾಕ ​ಅನ್ನು ಬಿಹಾರ ಅಂತ ಮೊದಲಿನಿಂದ ಹೇಳುತ್ತಿದ್ದಾರೆ. ಅದಕ್ಕೆ ಗೋಕಾಕ ಜನರೇ ಉತ್ತರ ನೀಡುತ್ತಾರೆ. ಯತ್ನಾಳಗೆ ವಿಜಯಪುರಕ್ಕೆ ಹೋಗಿ ಬೈಯಬೇಕಿಲ್ಲ, ಎಲ್ಲಿ ಬೈದರೂ ಹೋಗಿ ಮುಟ್ಟುತ್ತದೆ. ಮುಟ್ಟಿಸುವ ಕೆಲಸ ನಾವು ಮಾಡುತ್ತೇವೆ ಎಂದು ಸತೀಶ​ ಜಾರಕಿಹೊಳಿ ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ