LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಶುಭಂ ಶೇಳಕೆಯೊಂದಿಗೆ ಸೆಲ್ಫಿ : ಕೊನೆಗೂ ಸಿಪಿಐ ಕಾಲಿಮಿರ್ಚಿ ಎತ್ತಂಗಡಿ

ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೇಳಕೆ ಜೊತೆಗೆ ಸೆಲ್ಫಿ  ಕ್ಲಿಕ್ಕಿಸಿಕೊಂಡು ವಿವಾದಕ್ಕೊಳಗಾಗಿದ್ದ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಅವರನ್ನು ಸ್ಥಳ ನಿಗದಿಪಡಿಸದೇ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸಿಇಎನ್ ಇನ್ಸಪೆಕ್ಟರ್ ಬಿ ಆರ್ ಗಡ್ಡೇಕರ ಅವರನ್ನು ವರ್ಗಾಯಿಸಿದೆ.



ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್ ಕರಾಳ ದಿನ ಮೆರವಣಿಗೆ ಆರಂಭಕ್ಕೂ ಮೊದಲು ಸಂಭಾಜಿ ಉದ್ಯಾನದಲ್ಲಿ  ಶುಭಂ ಶೇಳಕೆ ಜೊತೆಗೆ ಇನ್ಸಪೆಕ್ಟರ್ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಆ ಪೋಟೋ ಕೂಡಾ  ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದ್ದು ಅವರ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಅವರನ್ನು  ಹುದ್ದೆ ತೋರಿಸದೇ ಎತ್ತಂಗಡಿ ಮಾಡಿದೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ