LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗುಜರಾತ್ ಟೈಟನ್ಸ್ ಆಟಗಾರರಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್

ಅಹ್ಮದಾಬಾದ, ಜೂ. 1 : ಐಪಿಎಲ್ ಫೈನಲ್‌ನಲ್ಲಿ ಸೋಲು ಕಂಡ ಬಳಿಕ ಹೋಟೆಲ್‌ಗೆ ಮರಳುತ್ತಿದ್ದ ವೇಳೆ ಗುಜರಾತ್ ಟೈಟಾನ್ಸ್ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಘಟನೆ ವರದಿಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಬಸ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಒಳಭಾಗದಲ್ಲಿ ಹೊಗೆ ಆವರಿಸಿತ್ತು. ಇದರಿಂದ ಆಟಗಾರರು ಹಾಗೂ ಸಿಬ್ಬಂದಿಯ ಸುರಕ್ಷತೆ ಕುರಿತು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಎಲ್ಲ ಆಟಗಾರರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.

ಬಳಿಕ ತಂಡದ ಸದಸ್ಯರು ಸುಮಾರು ಒಂದು ಗಂಟೆಯ ಕಾಲ ರಸ್ತೆ ಬದಿಯಲ್ಲೇ ಕಾಯಬೇಕಾದ ಪರಿಸ್ಥಿತಿ ಎದುರಾಯಿತು. ಹೋಟೆಲ್‌ಗೆ ಕರೆದೊಯ್ಯಲು ಮತ್ತೊಂದು ಬಸ್ ವ್ಯವಸ್ಥೆ ಮಾಡಿದ ನಂತರ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಗಳು ತಿಳಿಸಿವೆ. ಶಾರ್ಟ್ ಸರ್ಕ್ಯೂಟ್‌ಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದಕ್ಕೂ ಮುನ್ನ ರವಿವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್‌ಗಳ ಸೋಲು ಅನುಭವಿಸಿತ್ತು. ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡ ಬೆನ್ನಲ್ಲೇ ತಂಡಕ್ಕೆ ಈ ಅನಿರೀಕ್ಷಿತ ಘಟನೆ ಮತ್ತೊಂದು ಆತಂಕವನ್ನುಂಟು ಮಾಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಪ್ರತಿಭಟಟಿಸಲು ಅಮೆರಿಕದಿಂದ ಭಾರತಕ್ಕೆ ಮರಳುತ್ತಿರುವ ಅಭಿಜೀತ ದಿಪ್ಕೆರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಿಗೆ ಅಧಿಸೂಚನೆ : ಜೂ. 18ರಂದು ಮತದಾನಮುಸ್ಲಿಮರಿಗೆ ಕನಿಷ್ಠ ಪ್ರಾತಿನಿಧ್ಯವನ್ನಾದರೂ ಕೊಡಿ : ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹವಾಣಿಜ್ಯ ಸಿಲಿಂಡರ್ ದರ ಮತ್ತೆ  42 ರೂ. ಹೆಚ್ಚಳ!ಗುಜರಾತ್ ಟೈಟನ್ಸ್ ಆಟಗಾರರಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ಗೋವಾದಲ್ಲಿ ಕರ್ನಾಟಕ ವಾಹನಗಳಿಗೆ ಭಾರೀ ದಂಡ: ಮುಖ್ಯಮಂತ್ರಿಗೆ ಬೆನಕೆ ಮನವಿ ಇರಾನ್‌ ಮೇಲೆ ಮತ್ತೆ ದಾಳಿ ನಡೆಸಿದ ಅಮೆರಿಕಸುವರ್ಣ ಯುಗದ ಮಧುರ ಧ್ವನಿ ಮೌನಈ ಬಾರಿಯ ಮುಂಗಾರು ದುರ್ಬಲ, ವಾಡಿಕೆಗಿಂತ ಕಡಿಮೆ ಮಳೆ ಸಾಧ್ಯತೆ3 ತಿಂಗಳಲ್ಲಿ ತೀರ್ಪು ಪ್ರಕಟಿಸಿ: ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ನಿರ್ದೇಶನ