ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ  ಸ್ಪರ್ಧೆ ಮಾಡುವುದು ಬೇಡ‌ : ಸಂತೋಷ ಲಾಡ್

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಅವರು ರಾಜ್ಯಾದ್ಯಂತ ಪಕ್ಷ ಬಲಪಡಿಸುವ ಕಾರ್ಯ ಮಾಡಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತ ಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು. ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಹ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ. ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರದಲ್ಲಿ ತೊಡಗಲಿ ಎಂದು ತಿಳಿಸಿದ್ದಾರೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.