LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಚ್ಚಿರುವ ಇಂದಿರಾ ಕ್ಯಾಂಟೀನ ಮುಂದೆ ಧರಣಿ : ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯದ ಕೆಲವೆಡೆ ಇಂದಿರಾ ಕ್ಯಾಂಟೀನ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.



ಸರಣಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆದು ಗುಣಮಟ್ಟದ ತಿಂಡಿ-ಊಟ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ತಪ್ಪಿದ್ದಲ್ಲಿ ತಾವೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್​ಗಳ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.



ಇಂದಿರಾ ಕ್ಯಾಂಟೀನ್​ಗಳಿಗೆ ಬರುತ್ತಿರುವ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದು ಒಂದು ನೆಪ ಮಾತ್ರ. ರಾಜ್ಯ ಬಿಜೆಪಿ ಸರ್ಕಾರ ದುರುದ್ದೇಶದಿಂದ ಕ್ಯಾಂಟೀನ್ ತಿಂಡಿ-ಊಟದ ಗುಣಮಟ್ಟವನ್ನು ಕೆಡಿಸುತ್ತಿದೆ. ಇದರ ಜೊತೆಗೆ ಕ್ಯಾಂಟೀನ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಎಲ್ಲ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿನ ಕ್ಯಾಂಟೀನ್​ಗಳನ್ನು ಕೂಡಾ ಒಂದೊಂದಾಗಿ ಮುಚ್ಚಲಾಗುತ್ತಿದೆ. ಕ್ಯಾಂಟೀನ್ ಗುತ್ತಿಗೆಯ ನವೀಕರಣಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ. ಕಳೆದ ಆರು ತಿಂಗಳುಗಳಿಂದ ಬಿಬಿಎಂಪಿಗೆ ಕ್ಯಾಂಟೀನ್ ವೆಚ್ಚದ ಸಹಾಯಧನವನ್ನೂ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಗುತ್ತಿಗೆದಾರರು ಯಾವುದೇ ಕ್ಷಣದಲ್ಲಿ ಉಳಿದ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ನಿಲ್ಲಿಸಬಹುದು.



ನಾವು ಇಂದಿರಾ ಕ್ಯಾಂಟೀನ್​ಗಾಗಿ 2017-18ರಲ್ಲಿ ರೂ. 100 ಕೋಟಿ ಮತ್ತು 2018-19ರಲ್ಲಿ ರೂ.145 ಕೋಟಿಗಳನ್ನು ಬಜೆಟ್​ನಲ್ಲಿ ನೀಡಿದ್ದೆವು. 2022-23ರ ಬಿಜೆಪಿ ಸರ್ಕಾರ ಬಜೆಟ್​ನಲ್ಲಿ ಹಣ ನೀಡದೆ ಖರ್ಚಿನ ಭಾರವನ್ನು ಬಿಬಿಎಂಪಿ ತಲೆ ಮೇಲೆ ಹೊರಿಸಿರುವುದೇ ಈಗಿನ ಹಣದ ಕೊರತೆಗೆ ಕಾರಣ..



ಬೆಲೆ ಏರಿಕೆಯಿಂದಾಗಿ ಬೆಂಗಳೂರು ಮಹಾನಗರದಲ್ಲಿ ಒಂದು ಊಟಕ್ಕೆ ಇಂದು 50-60 ರೂಪಾಯಿ ನೀಡಬೇಕಾಗಿದೆ. ನಗರದ ಬಡವರು ಮತ್ತು ಬೇರೆ ಊರುಗಳಿಂದ ಬಂದವರಿಗೆ ಅಕ್ಷಯಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಿ ಅವರ ಶಾಪಕ್ಕೆ ಯಾಕೆ ತುತ್ತಾಗುತ್ತೀರಿ ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ