LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ನಾಳೆಯಿಂದ ಪೇ-ಸಿಎಂ ಪೋಸ್ಟರ್ ನಾವೇ ಅಂಟಿಸುತ್ತೇವೆ : ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್, ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇ-ಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದ್ದು ನಾಳೆಯಿಂದ ಕಾಂಗ್ರೆಸ್  ಶಾಸಕರೆಲ್ಲರೂ ಈ ಆಂದೋಲನದಲ್ಲಿ ಭಾಗಿಯಾಗಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಹೇಳಿದ್ದಾರೆ.



ಪೇಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಚೇರಿ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಜೆಪಿಯವರೂ ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ವಿರುದ್ಧ ಅವರೂ ಕೂಡ ಏನೇನೋ ಪೋಸ್ಟರ್ ಅಂಟಿಸಿದ್ದಾರೆ. ಪೊಲೀಸರಿಗೆ ಬಿಜೆಪಿಯವರುನ್ನು ಅವರನ್ಯಾಕೆ ಬಂಧಿಸಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.



ಪೇ-ಸಿಎಂ ಆಂದೋಲನ ಯಾರೋ ಇಬ್ಬರು ಮಾಡಿದ್ದಲ್ಲ ಇಡೀ ಪಕ್ಷದ ವತಿಯಿಂದ ಮಾಡಿದ್ದೇವೆ. ತಕ್ಷಣ ನಮ್ಮ ಸಿಬ್ಬಂದಿ ಮತ್ತು ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ನಾಳೆ ಕಾಂಗ್ರೆಸ್ ನ ಎಲ್ಲಾ ಶಾಸಕರು ಪೇ-ಸಿಎಂ ಪೋಸ್ಟರ್ ಅಂಟಿಸಲಿದ್ದೇವೆ ಎಂದು ಎಚ್ಚರಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ