LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೆಲಿಕಾಫ್ಟರನಲ್ಲಿ ಬಂದ ಸಿದ್ದರಾಮಯ್ಯ ನೋಡಲು ನೂಕುನುಗ್ಗಲು; ಲಾಠಿ ಪ್ರಹಾರ 

ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.



ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಸಹೋದರ ಸಂಬಂಧಿಯೊಬ್ಬರ ಮದುವೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿ, ಮದುವೆ ಮನೆಯ ವೇದಿಕೆಯನ್ನೇ ಬಳಸಿಕೊಂಡು ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.



ಕೊಪ್ಪಳದ ಕನಕಗಿರಿಗೆ ಶಿವರಾಜ ತಂಗಡಗಿ, ಕುಷ್ಟಗಿ ಕ್ಷೇತ್ರಕ್ಕೆ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ ರಾಯರೆಡ್ಡಿ, ಕೊಪ್ಪಳಕ್ಕೆ ರಾಘವೇಂದ್ರ ಹಿಟ್ನಾಳ ಹಾಗೂ ಗಂಗಾವತಿ ಕ್ಷೇತ್ರದಿಂದ ಇಕಬಾಲ ಅನ್ಸಾರಿಗೆ ಈ ಈ ಬಾರಿ ಚುನಾವಣೆಯಲ್ಲಿ ಮತ ನೀಡುವಂತೆ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ.



ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದ ಸಿದ್ದರಾಮಯ್ಯ ನೋಡೋಕೆ ನೂಕುನುಗ್ಗಲು ಸಂಭವಿಸಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ