ಕೃಷ್ಣಾ ನದಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲ ಪತ್ರಿಕೆಗಳು ಬರೆದಿದ್ದವು. ಅದರಂತೆ ಬೆಳಗಾವಿ ಎಸ್ ಪಿ ಸಂಜಯ ಪಾಟೀಲ ಅವರು ಪ್ರತಿ ಶನಿವಾರ ನಡೆಸಿಕೊಡುವ - ಫೋನ್ ಇನ್ - ಕಾರ್ಯಕ್ರಮಗಳಲ್ಲಿ ಸಹ ಈ ಕುರಿತು ಸಾಕಷ್ಟು ದೂರುಗಳು ಬಂದಿದ್ದವು. ಅವುಗಳ ಆಧಾರದ ಮೇಲೆ ರವಿವಾರ ಬೆಳ್ಳಂಬೆಳಿಗ್ಗೆ ಜಿಲ್ಲಾ ಪೊಲೀಸ ವರಿಷ್ಠ ಸಂಜಯ ಪಾಟೀಲ ಅವರು ಅಥಣಿಯ ಪೋಲೀಸರೊಂದಿಗೆ ಕೃಷ್ಣಾ ನದಿಗೆ ತೆರಳಿ ಅಕ್ರಮ ಮರಳುಗಾರಿಕೆಯನ್ನು ತಡೆದರು.ದಾಳಿಯಲ್ಲಿ ಮರಳುಗಾರಿಕೆಯಲ್ಲಿ ತೊಡಗಿದ್ದ 24 ಟ್ರ್ಯಾಕ್ಟರ್, 4 ಜೆಸಿಬಿ ಮತ್ತು ಒಂದು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ಕೃಷ್ಣಾ ನದಿಯಿಂದ ತೆಗೆದ ಮರಳನ್ನು ಪಕ್ಕದ ಬಾಗಲಕೋಟ ಮೂಲಕ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.








