LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Districts Bijapur

ಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಇಂಡಿ, ಆಗಸ್ಟ್ 7: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬೀದಿನಾಯಿಗಳ ದಾಳಿಗೆ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಟ್ಟಣದ ಗುತ್ತೇದಾರ್ ಲೇಔಟ್‌ನಲ್ಲಿ 9 ವರ್ಷದ ಬಾಲಕಿ ಪ್ರೇರಣಾ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಮುಖ, ಕಣ್ಣು ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ.

ಇದರ ಬೆನ್ನಲ್ಲೇ ಕರೀಂನಗರ ಪ್ರದೇಶದಲ್ಲೂ ಬಾಲಕ ತೈಮೂರ್ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಸ್ಥಳೀಯರು ತಕ್ಷಣ ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ'ವಿಶೇಷ ಮತಪಟ್ಟಿ ಪರಿಷ್ಕರಣೆ' ನೆಪದಲ್ಲಿ 1 ಕೋಟಿ ಮತದಾರರ ಹೆಸರು ಅಳಿಸುವ ಸಂಚು: ಕಾಂಗ್ರೆಸ್