LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಸುಪ್ರೀಮ ಕೋರ್ಟ ಅನುಮತಿ 

ಹೊಸದಿಲ್ಲಿ : ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಸುಪ್ರೀಮ ಕೋರ್ಟ‌ ಅನುಮತಿ ನೀಡಿದೆ. ಮಗಳ ಹೆರಿಗೆ ಹಿನ್ನೆಲೆ ಒಂದು ತಿಂಗಳು ಮಾತ್ರ ತೆರಳಲು ಅನುಮತಿಯನ್ನು ಸುಪ್ರೀಮ ಕೋರ್ಟ‌ ನೀಡಲಾಗಿದೆ.



ಅಕ್ರಮ ಗಣಿ ಹಗರಣ ಪ್ರಕರಣ ಎದುರಿಸುತ್ತಿರುವ ಗಣಿಧಣಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ ಎಂದು ಸುಪ್ರೀಮ ಕೋರ್ಟ ಮೆಟ್ಟಿಲೇರಿದ್ದರು.



ಕೆಲವು ದಿನಗಳಲ್ಲೇ ತನ್ನ ಮಗಳಿಗೆ ಹೆರಿಗೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಕನಿಷ್ಠ ಒಂದು ತಿಂಗಳಾದರೂ ತನಗೆ ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಮ ಕೋರ್ಟ​ಗೆ ಮನವಿ ಮಾಡಿದ್ದರು.



ಸಿಬಿಐ ಎರಡು ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಆಕ್ಷೇಪ ವ್ಯಕ್ತಪಡಿಸಿತ್ತು. ಇನ್ನು ನ್ಯಾ. ಎಂಆರ್. ಶಾ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಇಂದು ವಿಚಾರಣೆ ನಡೆಸಿತ್ತು.



ಇದೀಗ ಮಗಳ ಹೆರಿಗೆ ಹಿನ್ನೆಲೆ 1 ತಿಂಗಳ ಕಾಲ ಮಾತ್ರ ಬಳ್ಳಾರಿಗೆ ತೆರಳಲು ತೆರಳಲು ಅನುಮತಿ ಸುಪ್ರೀಮ ಕೋರ್ಟ‌ ನೀಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ