LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಾರು ಅಪಘಾತದ ಸುತ್ತ ಸಂಶಯದ ಹುತ್ತ: ಡಿಕ್ಕಿ ಹೊಡೆದ ಕ್ಯಾಂಟರ್ ಇನ್ನೂ ನಾಪತ್ತೆ!

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರೂ ಡಿಕ್ಕಿ ಹೊಡೆದ ಕ್ಯಾಂಟರ್ ವಾಹನ ಇನ್ನೂ ಪತ್ತೆ ಆಗಿಲ್ಲ.



ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕಾರಿಗೆ ಹಿಟ್  ಆಂಡ್ ರನ್ ಮಾಡಿ ಹೋಗಿದ್ದ ಹೊರರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಪಂಜಾಬ ಅಥವಾ ಹರಿಯಾಣಾದ ಕ್ಯಾಂಟರ್ ವಾಹನವೊಂದು ಲಕ್ಷ್ಮೀ ಹೆಬ್ಬಾಳಕರ ಅವರ ಕಾರು ಓವರಟೇಕ ಮಾಡುತ್ತಿದ್ದಾಗ ಅಪಘಾತ ಮಾಡಿ ಓಡಿ ಹೋಗಿದ್ದರ ಕುರಿತು ಸಂಶಯಗಳು ಪೊಲೀಸರಿಗೆ ವ್ಯಕ್ತವಾಗಿವೆ ಎನ್ನಲಾಗಿದೆ.



ಚಾಲಕನನ್ನು ‌ಬಂಧಿಸಲು ಬೆಳಗಾವಿ ಪೊಲೀಸರು ಬಲೆ‌ ಬೀಸಿದ್ದು‌ ಈಗಾಗಲೇ ಒಟ್ಟು 60 ಕ್ಯಾಂಟರ ವಾಹನಗಳ ಖಚಿತ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಹಿರೇಬಾಗೇವಾಡಿ ಟೋಲ್ ನಾಕಾದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿನ ವಿಡಿಯೋ ಆಧರಿಸಿ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಈಗಾಗಲೇ 30 ಕ್ಕೂ ಹೆಚ್ಚು ಕ್ಯಾಂಟರ್ ಚಾಲಕರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.



ಸಚಿವರ ಕಾರು ಅಪಘಾತವಾದ ಅಂದಿನ ದಿನ‌ ರಾಷ್ಟ್ರೀಯ ಹೆದ್ದಾರಿಯ ಮೇಲೆ ಸಂಚರಿಸಿದ ಪ್ರತಿಯೊಂದು ಕ್ಯಾಂಟರಗಳ ಮೇಲೆ ನಿಗಾ ಇಟ್ಟು ತನಿಖೆ ನಡೆಸಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ