LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಶಾಲಾ ಮಕ್ಕಳಿಗೆ ಸಿಹಿ ವಿಶೇಷ ಭೋಜನ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಿಶೇಷ ಭೋಜನ, ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.



ವಿಶೇಷ ದಿನಗಳಂದು ದಾನಿಗಳ ನೆರವಲ್ಲಿ ಹಬ್ಬದೂಟ ನೀಡಲು ಸೂಚನೆ ನೀಡಲಾಗಿದೆ. ದಾನಿಗಳು, ಟ್ರಸ್ಟ್, ಸಂಘ ಸಂಸ್ಥೆಗಳು, ಎಸ್.ಡಿ.ಎಂ.ಸಿ.ಗಳು ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ ನೆರವಿನೊಂದಿಗೆ ಮಕ್ಕಳಿಗೆ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿ ಊಟಕ್ಕಾಗಿ ಪೂರಕವಾಗಿ ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದಾಗಿದೆ.



ಪ್ರಸ್ತುತ ಬಿಸಿಯೂಟದೊಂದಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಿತರಿಸುವ ಆಹಾರ ಪದಾರ್ಥಗಳನ್ನು ಯೋಜನೆಯಡಿ ನೀಡಬಹುದು. ಮೊಟ್ಟೆ, ಶೇಂಗಾ ಚಿಕ್ಕಿ, ಹಲ್ವಾ, ಬಿಸ್ಕೆಟ್, ಹಪ್ಪಳ, ಉಪ್ಪಿನಕಾಯಿ, ವಿವಿಧ ಬಗೆಯ ಸಿಹಿತಿನಿಸು, ಸಂಜೆ ಸ್ನಾಕ್ಸ್, ಬಾಳೆಹಣ್ಣು, ಇತರೆ ಹಣ್ಣು, ಮೊಳಕೆ ಕಾಳು, ಬೆಳಗಿನ ಉಪಹಾರ ಮುಂತಾದ ಮಕ್ಕಳು ಇಷ್ಟಪಡುವ ಪೂರಕ ಆಹಾರ ಪದಾರ್ಥಗಳನ್ನು ನೀಡಬಹುದು ಎಂದು ಹೇಳಲಾಗಿದೆ.



ಊರಿನ ಹಬ್ಬ, ಜಾತ್ರೆ, ರಥೋತ್ಸವ, ರಾಷ್ಟ್ರೀಯ ಹಬ್ಬಗಳು, ಜನ್ಮದಿನ ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು ಎಂದು ಹೇಳಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ