LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸ್ಪೆಲ್ಲಿಂಗ್ ತಪ್ಪಾದ ಮಾತ್ರಕ್ಕೆ ಜನರ ಹಕ್ಕು ಕಿತ್ತುಕೊಳ್ಳುವುದು ತಪ್ಪು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ತಮ್ಮ ವಿರೋಧ ಇಲ್ಲ. ಆದರೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ನೀಡಿದ ಬಳಿಕವೇ ಈ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಎಸ್‌ಐಆರ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ, ಈ ವಿಷಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಚರ್ಚಿಸಿ ಹಲವು ಆಕ್ಷೇಪಗಳನ್ನು ದಾಖಲಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗೂ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲಾಗಿದ್ದು, ಮತದಾರರನ್ನು ಯಾವ ಮಾನದಂಡದ ಆಧಾರದ ಮೇಲೆ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ ಎಂದು ಹೇಳಿದರು.

ಯಾವುದೇ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೊದಲು ಸೂಕ್ತ ಕಾರಣ ನೀಡಬೇಕು. ದಾಖಲೆಗಳಲ್ಲಿ ಕೇವಲ ಕಾಗುಣಿತದ ತಪ್ಪು ಅಥವಾ ಸಣ್ಣ ಲೋಪಗಳಿರುವುದನ್ನು ಆಧಾರವಾಗಿಟ್ಟುಕೊಂಡು ಮತದಾನದಂತಹ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಅವಕಾಶ ಇರಬಾರದು. ಈ ಕುರಿತು ನಾವು ಕೇಳಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಇದುವರೆಗೆ ಯಾವುದೇ ಉತ್ತರ ನೀಡಿಲ್ಲ ಎಂದು ಅವರು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ನಾವು ಹೇಳುತ್ತಿಲ್ಲ. ಬದಲಾಗಿ ರಾಜ್ಯಕ್ಕೆ ದೋಷರಹಿತ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ನೀಡಬೇಕು ಎಂಬುದೇ ನಮ್ಮ ಆಗ್ರಹವಾಗಿದೆ. ಪ್ರತಿಯೊಂದು ಕ್ರಮವೂ ಪಾರದರ್ಶಕವಾಗಿರಬೇಕು ಮತ್ತು ಸಾರ್ವಜನಿಕರಲ್ಲಿ ಯಾವುದೇ ಅನುಮಾನಕ್ಕೆ ಅವಕಾಶ ಇರಬಾರದು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡುವ ಸಂದರ್ಭದಲ್ಲಿ ನಾಗರಿಕರಿಗೆ ತಮ್ಮ ಆಕ್ಷೇಪವನ್ನು ನ್ಯಾಯಮಂಡಳಿಯಲ್ಲಿ ಮಂಡಿಸುವ ಅವಕಾಶ ಕಲ್ಪಿಸಬೇಕು. ಆದರೆ ಅಂತಹ ಅವಕಾಶಗಳನ್ನೇ ಸೀಮಿತಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ಜನರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಕ್ರಮವನ್ನು ಒಪ್ಪಲಾಗದು ಎಂದು ಅವರು ಹೇಳಿದರು.

ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದ್ದೇವೆ. ಅಗತ್ಯವಿದ್ದರೆ ಈ ವಿಷಯವನ್ನು ಕಾನೂನಾತ್ಮಕವಾಗಿಯೂ ಪ್ರಶ್ನಿಸಲಾಗುವುದು ಎಂದು ಅವರು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ನ್ಯಾಯಮಂಡಳಿಯಲ್ಲಿ ವಿಚಾರಣೆ ನಡೆಸಲು ಅವಕಾಶವೇ ಇಲ್ಲದಂತಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸೂಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಾಗ, ಅದಕ್ಕೆ ಹಲವು ವರ್ಷಗಳು ಬೇಕಾಗುತ್ತದೆ ಎಂಬ ಕಾರಣಗಳನ್ನು ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮ ಮಂದಿರ ದೇಣಿಗೆ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಮ ಕೋರ್ಟ ನಿರಾಕರಣೆರಕ್ತದಾನಿಗಳಿಗೆ ₹1 ಲಕ್ಷವರೆಗೆ ಉಚಿತ ಅಪಘಾತ ವಿಮೆಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ; ಸಾರ್ವಜನಿಕರ ಸಹಕಾರಕ್ಕೆ ಆಯುಕ್ತ ಕಾರ್ತಿಕ ಮನವಿಚಾಲನೆಯಲ್ಲೇ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರುವೈರಲ್ ಆಡಿಯೋದಿಂದ ಬಿಜೆಪಿಯಲ್ಲಿ ಮತ್ತೆ ಸಂಚಲನರಾಮ ಮಂದಿರ ದೇಣಿಗೆ ಹಗರಣ: ಆರೋಪಿಗಳ ಪರ ವಕಾಲತ್ತು ವಹಿಸದಿರಲು ಅಯೋಧ್ಯೆ ವಕೀಲರ ಸಂಘದ ನಿರ್ಧಾರವಿದ್ಯುತ್ ನಿಗಮಗಳ ಖಾಸಗೀಕರಣದ ಪ್ರಶ್ನೆಯೇ ಇಲ್ಲ: ಕೆ.ಜೆ.ಜಾರ್ಜವಿದ್ಯುತ್ ಖಾಸಗೀಕರಣದ ಬಗ್ಗೆ ಸಚಿವ ಸಂಪುಟದಲ್ಲೇ ಅಂತಿಮ ನಿರ್ಧಾರ: ಡಿ.ಕೆ.ಶಿವಕುಮಾರಮನುಷ್ಯರನ್ನು ಕೊಂದವರು ಪ್ರಧಾನಿ, ಮುಖ್ಯಮಂತ್ರಿಗಳಾಗುತ್ತಾರೆ; ಹರಿಪ್ರಸಾದ ವಿವಾದಿತ ಹೇಳಿಕೆಸ್ಪೆಲ್ಲಿಂಗ್ ತಪ್ಪಾದ ಮಾತ್ರಕ್ಕೆ ಜನರ ಹಕ್ಕು ಕಿತ್ತುಕೊಳ್ಳುವುದು ತಪ್ಪು