LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಗಡಿ ವಿವಾದ; ಭಾಷಾವಾರು ಪ್ರಾಂತಗಳ ರಚನೆಯೇ ಅಂತಿಮ -ಮುಖ್ಯಮಂತ್ರಿ

ಬೆಳಗಾವಿ, ಡಿ. 20: ಭಾಷಾವಾರು ಪ್ರಾಂತಗಳ ರಚನೆಯಡಿ ಈಗಾಗಲೇ ನಿರ್ಧಾರವಾಗಿರುವ ಗಡಿಗಳೇ ಅಂತಿಮ. ಈ ಸಂಬಂಧ ರಾಜ್ಯದ ಗಡಿ ವಿಚಾರದಲ್ಲಿ ನಾಡಿನ ಹಿತ ಕಾಪಾಡುವ ನಮ್ಮ ನಿಲುವು ಅಚಲ. ಈ ನಿಲುವಿನಿಂದ ಒಂದಿಂಚೂ ಕೂಡ ಹಿಂದೆ ಸರಿಯುವುದಿಲ್ಲ. ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸಹ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.



ವಿಧಾನಸಭೆಯಲ್ಲಿ ಮಂಗಳವಾರ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿ, ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವ್ಯಾಜ್ಯ ಪ್ರಕರಣ ಸರ್ವೋಚ್ಛ ನ್ಯಾಯಾಲಯದಲ್ಲಿದೆ. ಗಡಿ ವ್ಯಾಜ್ಯಗಳು ಸಂವಿಧಾನಬದ್ಧವಾಗಿ ಸಂಸತ್ತಿನಲ್ಲಿಯೇ ಪರಿಹಾರವಾಗಬೇಕಾಗಿರುವದರಿಂದ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಪ್ರಕರಣ ನಿರ್ವಹಣೆಯಾಗಬೇಕೇ ಎಂಬುದರ ಬಗ್ಗೆಯೇ ಈಗ ವಿಚಾರಣೆ ನಡೆಯುತ್ತಿದೆ. ಪ್ರಕರಣದ ನಿರ್ವಹಣೆ ಸಮರ್ಥನೀಯವಲ್ಲ. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬಂದ ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳು ನೀಡಿದ ಪ್ರತಿಕ್ರಿಯೆಗೆ ತಾವು ಕೂಡ ತೀಕ್ಷ್ಣ ಉತ್ತರ ನೀಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.



ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ರಾಜ್ಯಕ್ಕೆ ಮಹಾರಾಷ್ಟ್ರದ ಮಂತ್ರಿಗಳು, ಸಂಸದರು ಪ್ರವೇಶಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರಕ್ಕೆ ಬರೆದಿರುವ ಪತ್ರ ಮಹತ್ವದ ದಾಖಲೆಯಾಗಲಿದೆ. ಮಹಾರಾಷ್ಟ್ರ ರಾಜಕಾರಣಿಗಳು, ಸಂಘಟನೆಗಳು ಪ್ರಚೋದನಕಾರಿ ಹೇಳಿಕೆ ನೀಡಿ ಉದ್ವಿಗ್ನ ವಾತಾವರಣ ಉಂಟು ಮಾಡಲು ಪ್ರಯತ್ನಿಸಿದರೂ ಕೂಡ ನಮ್ಮ ರಾಜ್ಯದ ಆಡಳಿತ ಪಕ್ಷವಾಗಲಿ, ಪ್ರತಿಪಕ್ಷಗಳಾಗಲಿ, ಸಂಘಟನೆಗಳಾಗಲಿ ಇಂತಹ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದೇ ಸಂಯಮ, ಜವಾಬ್ದಾರಿ ತೋರಿಸಿವೆ ಎಂದು ಅವರು ಹೇಳಿದರು.



ಗಡಿ ಭಾಗದ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತೊಂದರೆಯಾಗಬಾರದು. ಎರಡೂ ಕಡೆ ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ ಕೇಂದ್ರ ಗೃಹ ಸಚಿವರು ಕರೆದ ಸಭೆಗೆ ಹಾಜರಾಗಿ, ರಾಜ್ಯದ ಹಿತ ಕಾಯುವ ನಿಲುವನ್ನು ಸ್ಪಷ್ಟಪಡಿಸಿ ಬಂದಿದ್ದೇನೆ. ಅನಧಿಕೃತ ಟ್ವಿಟರ್ ಖಾತೆಯಿಂದ ವ್ಯಕ್ತವಾಗಿದ್ದ ಪ್ರಚೋದನಕಾರಿ ಅಭಿಪ್ರಾಯ ತಮ್ಮದಲ್ಲ ಎಂದು ಆ ಸಭೆಯಲ್ಲಿ ಸ್ಪಷ್ಟಪಡಿಸಿದ್ದೇನೆ. ಸಭೆಯ ನಂತರ ಮಾಧ್ಯಮಗಳಿಗೂ ಈ ವಿವರ ನೀಡಿದ್ದೇನೆ. ಸಮಯದ ಅಭಾವದ ಕಾರಣ ಸರ್ವಪಕ್ಷಗಳ ಸಭೆ ಕರೆದು ಅಭಿಪ್ರಾಯಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಮುಂದೆಯೂ ಈ ಕುರಿತು ಸರ್ವಪಕ್ಷ ಸಭೆ ನಡೆಸಲಾಗುವುದು. ಶಿಕ್ಷಣ, ಆರೋಗ್ಯ, ವ್ಯಾಪಾರ ಸೇರಿದಂತೆ ಅನೇಕ ಕಾರಣಗಳಿಗಾಗಿ ಪ್ರತಿನಿತ್ಯದ ಒಡನಾಟ ಗಡಿ ಭಾಗದ ಪ್ರದೇಶಗಳಲ್ಲಿರುತ್ತದೆ. ಅವುಗಳಿಗೆ ಸಮಸ್ಯೆಯಾಗದಂತೆ ರಾಜ್ಯಗಳ ಹಂತದಲ್ಲಿಯೇ ಕ್ರಮ ವಹಿಸಲು ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.



ಗಡಿ ಆಚೆಗಿರುವ ಕನ್ನಡಿಗರ ಹಿತರಕ್ಷಣೆಗೂ ಸರ್ಕಾರ ಬದ್ಧವಾಗಿದೆ. ರಾಜ್ಯಗಳ ಪುನರ್ಡವಿಂಗಡನಾ ಕಾಯ್ದೆ ಹಾಗೂ ಭಾಷಾವಾರು ಪ್ರಾಂತಗಳ ರಚನೆಯಡಿ ನಿರ್ಧಾರವಾಗಿರುವ ಗಡಿಗಳೇ ಅಂತಿಮ. ಈ ವಿಷಯದಲ್ಲಿ ಅನಗತ್ಯ ತಂಟೆ, ತಗಾದೆಗಳಿಗೆ ರಾಜ್ಯ ಕಿವಿಗೊಡುವುದಿಲ್ಲ ಮುಖ್ಯಮಂತ್ರಿಗಳು ವಿವರಿಸಿದರು.



ಶಾಸಕರಾದ ಎಚ್.ಕೆ.ಪಾಟೀಲ,‌ ಶಿವಾನಂದ ಪಾಟೀಲ ಬಂಡೆಪ್ಪ ಕಾಶೆಂಪೂರ ಮತ್ತಿತರರು ಸಹ ಮಾತನಾಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ